Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:21 - ಕನ್ನಡ ಸತ್ಯವೇದವು C.L. Bible (BSI)

21 ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಕಾಲದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ. ಜೆರುಸಲೇಮಿನಲ್ಲಿರುವ ಜನರು ಬೇಗನೆ ಅಲ್ಲಿಂದ ಪಲಾಯನ ಮಾಡಲಿ. ನೀವು ಪಟ್ಟಣದ ಹತ್ತಿರವಿದ್ದರೂ ಅದರೊಳಗೆ ಹೋಗದಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ; ಪಟ್ಟಣದ ಮಧ್ಯದಲ್ಲಿರುವವರು ಹೊರಟು ಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಪಟ್ಟಣಕ್ಕೆ ಪ್ರವೇಶಿಸದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಜೆ ಕೊನ್-ಕೊನ್ ಜುದೆಯಾತ್ ಹಾತ್ ತೆನಿ ಮಡ್ಡಿಯಾ ವೈನಿ ಪಳುನ್ ಜಾವ್ಚೆ; ಜೆ ಕೊನ್ ಶಾರಾತ್ ಭುತ್ತುರ್ ಹಾತ್ ತೆನಿ ಶಾರ್ ಸೊಡುನ್ ಪಳುಚೆ, ಅನಿ ಜೆ ಕೊನ್ ಖೆಡ್ಯಾತ್ನಿ ಹಾತ್, ತೆನಿ ಶಾರಾಚ್ಯಾ ಭುತ್ತುರ್ ಜಾಯ್‌ನಸ್ತಾನಾ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:21
13 ತಿಳಿವುಗಳ ಹೋಲಿಕೆ  

ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ಮಾಳಿಗೆಯ ಮೇಲಿರುವವನು ಕೆಳಕ್ಕೆ ಇಳಿಯಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳಲು ಯತ್ನಿಸದೆ ಓಡಿಹೋಗಲಿ;


(ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ). ಆಗ ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ.


ಆದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಈ ನಾಡಿಗೆ ಮುತ್ತಿಗೆ ಹಾಕಿದಾಗ, ಬಾಬಿಲೋನಿಯ ಮತ್ತು ಸಿರಿಯದವರ ಸೈನ್ಯಗಳಿಂದ ತಪ್ಪಿಸಿಕೊಳ್ಳಲು, ‘ಜೆರುಸಲೇಮಿಗೆ ಹೋಗೋಣ ಬನ್ನಿ’ ಎಂದುಕೊಂಡು ಬಂದೆವು. ಈ ಕಾರಣದಿಂದಲೇ ಇಲ್ಲಿ ವಾಸಿಸುತ್ತಿದ್ದೇವೆ,” ಎಂದು ಹೇಳಿದರು.


ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.


ಲೋಟನ ಹೆಂಡತಿಯೋ, ಅವನ ಹಿಂದೆ ಬರುತ್ತಿದ್ದಾಗ ಹಿಂದಿರುಗಿ ನೋಡಿದಳು; ಕೂಡಲೇ ಉಪ್ಪಿನ ಕಂಬವಾಗಿ ಮಾರ್ಪಟ್ಟಳು.


ಊರ ಹೊರಗೆ ಬಿಟ್ಟಾದ ಮೇಲೆ ಆ ಇಬ್ಬರಲ್ಲಿ ಒಬ್ಬನು, “ಪ್ರಾಣ ಉಳಿಸಿಕೊಳ್ಳಬೇಕಾದರೆ ಓಡಬೇಕು, ಹಿಂದಕ್ಕೆ ನೋಡಬಾರದು; ಬಯಲುಸೀಮೆಯಲ್ಲೂ ನಿಲ್ಲದೆ ಗುಡ್ಡಗಾಡಿಗೆ ಓಡಬೇಕು, ಇಲ್ಲವಾದರೆ ನಾಶವಾದೀತು!” ಎಂದು ಎಚ್ಚರಿಸಿದನು.


ಆಗ ಯೆರೆಮೀಯನು ಬೆನ್ಯಾಮೀನ್ ನಾಡಿನಲ್ಲಿ ತನಗೆ ಬರಬೇಕಾಗಿದ್ದ ಸೊತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಜೆರುಸಲೇಮಿನಿಂದ ಅಲ್ಲಿಗೆ ಹೊರಟನು.


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು