Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:18 - ಕನ್ನಡ ಸತ್ಯವೇದವು C.L. Bible (BSI)

18 ದೇವರ ಸಾಮ್ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರ ರಾಜ್ಯ ಬರುವ ತನಕ, ನಾನೆಂದಿಗೂ ತಿರುಗಿ ದ್ರಾಕ್ಷಾರಸ ಕುಡಿಯುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರ ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ತುಮ್ಕಾ ಸಾಂಗ್ತಾ ಅತ್ತಾಚ್ಯಾನ್, ದೆವಾಚೆ ರಾಜ್ ಯೆಯ್ ಪತರ್ ಮಿಯಾ ಅನಿ ಹಿ ವಾಯ್ನ್ ಫಿ ನಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:18
22 ತಿಳಿವುಗಳ ಹೋಲಿಕೆ  

ನಾನು ನನ್ನ ಪಿತನ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸ ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ದೇವರ ಸಾಮ್ರಾಜ್ಯದಲ್ಲಿ ಇದು ಪೂರ್ಣ ಅರ್ಥವನ್ನು ಪಡೆಯುವ ತನಕ ನಾನಿದನ್ನು ಇನ್ನು ಭುಜಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ನಾನು ದೇವರ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ.


“ಇಲ್ಲಿರುವವರಲ್ಲಿ ಕೆಲವರು, ದೇವರ ಸಾಮ್ರಾಜ್ಯವನ್ನು ನೋಡದೆ ಸಾವನ್ನು ಸವಿಯುವುದಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಅಲ್ಲಿ ರಕ್ತಬೋಳ ಮಿಶ್ರಿತ ದ್ರಾಕ್ಷಾರಸವನ್ನು ಯೇಸುವಿಗೆ ಕೊಟ್ಟರು. ಆದರೆ ಅದನ್ನು ಅವರು ಕುಡಿಯಲಿಲ್ಲ.


ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟರು. ಅವರೆಲ್ಲರೂ ಅದರಿಂದ ಕುಡಿದರು.


ಪುನಃ ಯೇಸುಸ್ವಾಮಿ, ಅವರಿಗೆ “ಇಲ್ಲಿರುವವರಲ್ಲಿ ಕೆಲವರು ದೇವರ ಸಾಮ್ರಾಜ್ಯವು ಪ್ರಭಾವದೊಡನೆ ಜಗತ್ತಿನಲ್ಲಿ ಪ್ರತ್ಯಕ್ಷವಾಗುವುದನ್ನು ನೋಡದೆ ಮರಣಹೊಂದುವುದಿಲ್ಲ ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದು ಹೇಳಿದರು.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಅದಕ್ಕೆ ಆ ಬಳ್ಳಿ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮಾನವರಿಗೂ ಆನಂದ ತರುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು