Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:30 - ಕನ್ನಡ ಸತ್ಯವೇದವು C.L. Bible (BSI)

30 ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತುಮಿ ಮಾಜ್ಯಾ ರಾಜಾತ್ ಮಾಜ್ಯಾ ವಾಂಗ್ಡಾ ಜೆವ್ನಾಚ್ಯಾ ಮೆಜಾರ್ ಬಸ್ತ್ಯಾಶಿ, ಅನಿ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾಂಚ್ಯಾ ವರ್‍ತಿ ರಾಜಾಚ್ಯಾ ಕುರ್ಚಿರ್ ಬಸುನ್ ತುಮಿ ರಾಜ್ ಚಾಲ್ವುತ್ಯಾಶಿ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:30
16 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು.


ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


ನನ್ನ ತಂದೆಯ ಮನೆಯವರೆಲ್ಲರೂ ಅರಸರಾದ ನನ್ನ ಒಡೆಯರ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ತಮ್ಮ ಸೇವಕನಾದ ನನ್ನನ್ನು ಭೋಜನಕ್ಕೆ ತಮ್ಮ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡಿರಿ. ಅರಸರಿಗೆ ಹೆಚ್ಚಾಗಿ ಮೊರೆ ಇಡುವುದಕ್ಕೆ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.


“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.


ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು