Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:25 - ಕನ್ನಡ ಸತ್ಯವೇದವು C.L. Bible (BSI)

25 ಅವರು ಕೇಳಿಕೊಂಡ ಪ್ರಕಾರ ಕೊಲೆಕಲಹಗಳ ನಿಮಿತ್ತ ಸೆರೆಯಲ್ಲಿದ್ದ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನಾದರೋ ಅವರ ಇಚ್ಛಾನುಸಾರಕ್ಕೆ ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದಂಗೆ ಕೊಲೆಗಳ ನಿವಿುತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು ಯೇಸುವನ್ನು ಅವರ ಚಿತ್ತಾನುಸಾರ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಪಿಲಾತನು ಜನರು ಬರಬ್ಬನನ್ನು ಎಂದರೆ, ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಿದವನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನೋ ಅವರ ಇಷ್ಟಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆನಿ ಇಚಾರಲ್ಲ್ಯಾ ಡಂಗೊ ಉಟ್ವುನ್, ಅನಿ ಲೊಕಾಕ್ನಿ ಜಿವಾನಿ ಮಾರುನ್ ಬಂದಿಖಾನ್ಯಾತ್ ಹೊತ್ತ್ಯಾಕ್ ತೆನಿ ಸೊಡುನ್ ದಿಲ್ಯಾನ್, ಅನಿ ತುಮ್ಕಾ ಕಾಯ್ ಪಾಜೆ ತೆ ಕರಾ ಮನುನ್ ಜೆಜುಕ್ ತೆಂಚ್ಯಾ ತಾಬೆತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:25
12 ತಿಳಿವುಗಳ ಹೋಲಿಕೆ  

ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ.


ಪಿಲಾತನು ಜನಸಮೂಹವನ್ನು ಮೆಚ್ಚಿಸುವ ಸಲುವಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ, ಶಿಲುಬೆಗೇರಿಸುವುದಕ್ಕೆ ಒಪ್ಪಿಸಿಬಿಟ್ಟನು.


ಅದಕ್ಕೆ ಅವರು, “ಬೇಡ, ಇವನು ಬೇಡ. ನಮಗೆ ಬರಬ್ಬನನ್ನು ಬಿಟ್ಟುಕೊಡಿ,” ಎಂದು ಬೊಬ್ಬೆಹಾಕಿದರು. ಬರಬ್ಬನೋ ಒಬ್ಬ ದರೋಡೆಕೋರನಾಗಿದ್ದನು.


ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.


ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು.


ಬಳಿಕ ಪಿಲಾತನು ಅವರ ಇಷ್ಟದಂತೆಯೇ ಬರಬ್ಬನನ್ನು ಬಿಟ್ಟುಕೊಟ್ಟನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೇರಿಸಲು ಒಪ್ಪಿಸಿಬಿಟ್ಟನು.


“ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸ ಇವನೇ; ಸರ್ವೇಶ್ವರ ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ.


ಆ ಜನರ ಕೋರಿಕೆಯಂತೆಯೇ ಆಗಲೆಂದು ಪಿಲಾತನು ತೀರ್ಮಾನಿಸಿದನು.


ಸೈನಿಕರು ಯೇಸುಸ್ವಾಮಿಯನ್ನು ಕರೆದೊಯ್ಯುವಾಗ ಸಿರೇನ್ ಪಟ್ಟಣದ ಸಿಮೋನ ಎಂಬಾತ ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಅವನನ್ನು ಹಿಡಿದು ಶಿಲುಬೆಯನ್ನು ಹೊತ್ತು ಯೇಸುವಿನ ಹಿಂದೆ ಬರುವಂತೆ ಮಾಡಿದರು.


ಕಡೆಗೆ ಪಿಲಾತನು ಯೇಸುವನ್ನು ಶಿಲುಬೆಗೇರಿಸುವುದಕ್ಕಾಗಿ ಅವರಿಗೆ ಒಪ್ಪಿಸಿಬಿಟ್ಟನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡರು.


“ಆ ಬೆಳ್ಳಿ ನಿನ್ನಲ್ಲೇ ಇರಲಿ: ಆ ಜನರಿಗಾದರೋ ನಿನಗೆ ಉಚಿತವೆಂದು ಕಂಡುಬಂದ ರೀತಿಯಲ್ಲಿ ನೀನು ಮಾಡಬಹುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು