Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:5 - ಕನ್ನಡ ಸತ್ಯವೇದವು C.L. Bible (BSI)

5 ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದಕ್ಕೆ ಅವರು - ಗಲಿಲಾಯದಲ್ಲಿ ಪ್ರಾರಂಭಮಾಡಿ ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ ಎಂದು ಇನ್ನೂ ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದಕ್ಕೆ ಅವರು, “ಈತನು ಗಲಿಲಾಯ ಪ್ರಾಂತ ಮೊದಲುಗೊಂಡು ಈ ಸ್ಥಳದವರೆಗೂ ಯೂದಾಯ ಪ್ರಾಂತದ ಎಲ್ಲಾ ಕಡೆಗೂ ಬೋಧಿಸುತ್ತಾ, ಜನರನ್ನು ಕ್ರಾಂತಿಗೆ ಪ್ರೇರೇಪಿಸುತ್ತಿದ್ದಾನೆ,” ಎಂದು ಒತ್ತಾಯ ಪೂರ್ವಕವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ತೆನಿ, “ಅನಿ ಜೊರಾನ್ ಸಗ್ಳ್ಯಾ ಜುದೆಯಾತ್ಲ್ಯಾ ಲೊಕಾಕ್ನಿ ಶಿಕ್ವುನ್ಗೆತ್, ಹ್ಯೊ ಲೊಕಾತ್ನಿ ಡಂಗೊ ಉಟ್ವುಲಾ, ತೆನಿ ಅಪ್ನಾಚೆ ಹೆ ಕಾಮ್ ಗಾಲಿಲಿಯಾತ್ನಾ ಚಾಲು ಕರಲ್ಲ್ಯಾನ್, ಅನಿ ಅತ್ತಾ ತೊ, ಹಿತ್ತೆ ಯೆವ್ನ್ ಪಾವ್ಲಾ” ಮನುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:5
24 ತಿಳಿವುಗಳ ಹೋಲಿಕೆ  

ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.


ಮರುದಿನ ಯೇಸು ಸ್ವಾಮಿ ಗಲಿಲಾಯ ನಾಡಿಗೆ ಹೋಗಲು ನಿರ್ಧರಿಸಿದರು. ಅವರು ಫಿಲಿಪ್ಪನನ್ನು ಕಂಡು, “ನನ್ನೊಡನೆ ಬಾ,” ಎಂದು ಕರೆದರು.


ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು:


ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು.


ಇತ್ತೀಚೆಗೆ ಜುದೇಯ ನಾಡಿನಾದ್ಯಂತ ನಡೆದ ಘಟನೆಗಳು ನಿಮಗೆ ತಿಳಿದೇ ಇರಬೇಕು.


ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು.


ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.


ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು.


ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.


ಅದಕ್ಕೆ ಅವರು, “ನೀನೂ ಗಲಿಲೇಯದವನೋ? ಪವಿತ್ರಗ್ರಂಥವನ್ನು ಓದಿನೋಡು; ಗಲಿಲೇಯದಿಂದ ಯಾವ ಪ್ರವಾದಿಯೂ ತಲೆಯೆತ್ತುವುದಿಲ್ಲ, ಎಂಬುದು ನಿನಗೇ ಗೊತ್ತಾಗುತ್ತದೆ,” ಎಂದು ಮರುತ್ತರಕೊಟ್ಟರು.


ಇನ್ನೂ ಕೆಲವರು, “ಈತನೇ ಲೋಕೋದ್ಧಾರಕ,” ಎಂದರು. ಮತ್ತೆ ಕೆಲವರು, “ಲೋಕೋದ್ಧಾರಕ ಗಲಿಲೇಯದಿಂದ ಬರುವುದುಂಟೇ?


ಆದರೂ ಅವರು ಅಧಿಕಾಧಿಕವಾಗಿ ಆರ್ಭಟಿಸುತ್ತಾ ಯೇಸುವನ್ನು ಶಿಲುಬೆಗೆ ಏರಿಸಲೇ ಬೇಕೆಂದು ಕೂಗಾಡಿದರು. ಕಟ್ಟಕಡೆಗೆ ಕೂಗಾಟಕ್ಕೇ ಗೆಲುವಾಯಿತು!


ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ,


ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.


ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು.


ಇದನ್ನು ಕೇಳಿದಾಕ್ಷಣವೇ ಪಿಲಾತನು, “ಇವನು ಗಲಿಲೇಯದವನೋ?” ಎಂದು ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು