Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:2 - ಕನ್ನಡ ಸತ್ಯವೇದವು C.L. Bible (BSI)

2 ಅನ್ನನು ಮತ್ತು ಕಾಯಫನು ಅಂದಿನ ಪ್ರಧಾನ ಯಾಜಕರು. ಆಗ ಬೆಂಗಾಡಿನಲ್ಲಿ ಜಕರೀಯನ ಮಗ ಯೊವಾನ್ನನಿಗೆ ದೇವರ ಸಂದೇಶದ ಬೋಧೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನ್ನನೂ ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಅಡವಿಯಲ್ಲಿ ದೇವರ ವಾಕ್ಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅನ್ನನು ಮತ್ತು ಕಾಯಫನು ಮಹಾಯಾಜಕರಾಗಿದ್ದರು. ಆ ಸಮಯದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ದೇವರಿಂದ ಆಜ್ಞೆಯೊಂದು ಬಂತು. ಯೋಹಾನನು ಗುಡ್ಡಗಾಡಿನಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅನ್ನನು ಮತ್ತು ಕಾಯಫನು ಮಹಾಯಾಜಕರು ಆಗಿದ್ದ ಸಮಯದಲ್ಲಿ, ಅರಣ್ಯದಲ್ಲಿದ್ದ ಜಕರೀಯನ ಮಗ ಯೋಹಾನನಿಗೆ ದೇವರ ವಾಕ್ಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನ್ನಾಸ್ ಅನಿ ಕಾಯಿಫಾಸ್ ಮನ್ತಲೆ ತನ್ನಾ ಮೊಟೆ ಯಾಜಕ್ ಹೊವ್ನ್ ಹೊತ್ತೆ. ಹ್ಯಾ ಎಳಾರ್ ಎಕ್ ಹಾಳ್ ಪಡಲ್ಲ್ಯಾ ಡಂಗ್ಳಿತ್ ಜೆಕರಿಯಾಚ್ಯಾ ಲೆಕಾಕ್, ಜುವಾಂವಾಕ್, ಎಕ್ ದೆವಾಚಿ ಗೊಸ್ಟ್ ಗಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:2
21 ತಿಳಿವುಗಳ ಹೋಲಿಕೆ  

ಪ್ರಧಾನಯಾಜಕ ಅನ್ನಾ ಹಾಗೂ ಕಾಯಫ, ಯೊವಾನ್ನ, ಅಲೆಕ್ಸಾಂಡರ್ ಮತ್ತು ಪ್ರಧಾನಯಾಜಕನ ಕುಟುಂಬದವರು ಆ ಸಭೆಯಲ್ಲಿ ಹಾಜರಿದ್ದರು.


ಆಗ ಅನ್ನನು ಯೇಸುವನ್ನು ಬಂಧಿಸಿ ಕಾಯಫನ ಬಳಿಗೆ ಕಳುಹಿಸಿದನು.


ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.


ಒಂದು ದಿನ ಅಮಿತ್ತಾಯನ ಮಗನಾದ ಯೋನನಿಗೆ ಸರ್ವೇಶ್ವರಸ್ವಾಮಿಯ ವಾಣಿ ಕೇಳಿಸಿತು.


ಅದಕ್ಕೆ ಯೊವಾನ್ನನು, “ಪ್ರಭುವಿನ ಮಾರ್ಗವನ್ನು ನೇರಗೊಳಿಸಿರೆಂದು ಬೆಂಗಾಡಿನಲ್ಲಿ ಕೂಗುವವನ ಸ್ವರವೇ ನಾನು,” ಎಂದು ಯೆಶಾಯ ಪ್ರವಾದಿಯ ಮಾತುಗಳಲ್ಲೇ ಉತ್ತರಕೊಟ್ಟನು.


ಇತ್ತ ಮುಖ್ಯಯಾಜಕರು ಮತ್ತು ಪ್ರಜಾಪ್ರಮುಖರು ‘ಕಾಯಫ’ ಎಂಬ ಪ್ರಧಾನ ಯಾಜಕನ ಭವನದಲ್ಲಿ ಒಟ್ಟುಗೂಡಿದರು.


ಇಗೋ, ಈ ವಾಣಿಯನ್ನು ಕೇಳಿ : “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ.


ಯೊವಾನ್ನನಿಂದ ಬಂದಿದ್ದ ಶಿಷ್ಯರು ಹೊರಟುಹೋದಾಗ, ಯೇಸುಸ್ವಾಮಿ ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಮಾತನಾಡಿದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೆ?


ಅಮೋನನ ಮಗನು ಹಾಗೂ ಜುದೇಯದ ಅರಸನು ಆದ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಜೆಫನ್ಯನಿಗೆ ಕೊಟ್ಟ ಸಂದೇಶವಿದು: (ಜೆಫನ್ಯನು ಕೂಷಿಯ ಮಗನು; ಕೂಷಿಯನು ಗೆದಲ್ಯನಿಗೆ, ಗೆದಲ್ಯನು ಅಮರ್ಯನಿಗೆ, ಅಮರ್ಯನು ಹಿಜ್ಕೀಯನಿಗೆ ಹುಟ್ಟಿದವರು).


ಯೋಥಾಮ, ಆಹಾಜ, ಹಿಜ್ಕೀಯ ಇವರು ಜುದೇಯದ ಅರಸರು. ಇವರ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕನಿಗೆ ಒಂದು ದೈವದರ್ಶನವಾಯಿತು. ಅದು ಸಮಾರ್ಯ ಮತ್ತು ಜೆರುಸಲೇಮನ್ನು ಕುರಿತದ್ದಾಗಿತ್ತು.


ಸರ್ವೇಶ್ವರ ಸ್ವಾಮಿ ನನಗೆ ನೀಡಿದ ಆದೇಶ ಇದು :


ಜುದೇಯದ ಅರಸನೂ ಅಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರುಷದಲ್ಲಿ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬಂತು.


ಬಾಬಿಲೋನಿಯಾ ದೇಶದ ಕೇಬಾರ್ ನದಿಯ ಹತ್ತಿರ, ಬೂಜಿಯ ಮಗ ಹಾಗೂ ಯಾಜಕನಾದ ಯೆಜೆಕಿಯೇಲ ಎಂಬ ನನಗೆ ಸರ್ವೇಶ್ವರ ಸ್ವಾಮಿಯ ವಾಣಿ ನೇರವಾಗಿ ಕೇಳಿಸಿತು; ಅವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


“ ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ, ಕಳಿಸುವೆನು ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು,’ ಎಂದು ದೇವರೇ ನುಡಿದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು