Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:3 - ಕನ್ನಡ ಸತ್ಯವೇದವು C.L. Bible (BSI)

3 ಆತನು ಜೋರ್ಡನ್ ನದಿಯ ಪರಿಸರ ಪ್ರಾಂತದಲ್ಲೆಲ್ಲಾ ಸಂಚರಿಸುತ್ತಾ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ ಮತ್ತು ಸ್ನಾನದೀಕ್ಷೆ ಪಡೆದುಕೊಳ್ಳಿರಿ; ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು,” ಎಂದು ಸಾರಿ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ - ನೀವು ಪಾಪ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋಹಾನನು ಜೋರ್ಡನ್ ನದಿಯ ಸುತ್ತಲಿರುವ ಪ್ರದೇಶದಲ್ಲೆಲ್ಲಾ ಸಂಚರಿಸಿ, ತಮ್ಮ ಪಾಪಪರಿಹಾರಕ್ಕಾಗಿ ಅವರು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಜನರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಯೊರ್ದನ್ ನದಿಯ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು, ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಪಡೆಯುವದರ ಕುರಿತು ಸಾರಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚೆಸಾಟ್ನಿ ಜುವಾಂವ್ ಜೊರ್ದಾನ್ ನ್ಹಯ್ಚ್ಯಾ ಭೊತ್ಯಾನ್ಲ್ಯಾ ಜಾಗ್ಯಾರ್, “ತುಮ್ಚೆ ಪಾಪಾಚೆ ಜಿವನ್ ಬದ್ಲಾ, ಅನಿ ಬಾಲ್ತಿಮ್ ಘೆವಾ, ಅನಿ ದೆವ್ ತುಮ್ಚಿ ಪಾಪಾ ಮಾಪ್ ಕರ್‍ತಾ” ಮನುನ್ ಸಾಂಗುನ್ಗೆತ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:3
12 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ II ಪಾಪಕ್ಷಮೆಯನು ಸಾರುವೆ ಆತನ ಪ್ರಜೆಗೆ I ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ II


ಇನ್ನು ತಡಮಾಡುವುದೇಕೆ? ಏಳು, ಅವರ ನಾಮವನ್ನು ಜಪಿಸಿ, ದೀಕ್ಷಾಸ್ನಾನವನ್ನು ಪಡೆದು ನಿನ್ನ ಪಾಪಗಳನ್ನು ತೊಳೆದುಕೊ,’ ಎಂದನು.


ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು.


ಇವರ ಆಗಮನಕ್ಕೆ ಸಿದ್ಧತೆಯಾಗಿ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದರು.


ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


ಯೋವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದ ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿಯ ಎಂಬಲ್ಲಿ ಇದೆಲ್ಲವೂ ನಡೆಯಿತು.


ಇಸ್ರಯೇಲರಲ್ಲಿ ಅನೇಕರನ್ನು ಅವರ ದೇವರಾದ ಸರ್ವೇಶ್ವರನ ಕಡೆಗೆ ಮರಳಿ ತಿರುಗಿಸುವನು.


ಯೇಸುಸ್ವಾಮಿ ಪವಿತ್ರಾತ್ಮಭರಿತರಾಗಿ ಜೋರ್ಡನ್ ನದಿತೀರದಿಂದ ಹಿಂದಿರುಗಿದ ಮೇಲೆ ಅದೇ ಆತ್ಮದಿಂದ ಪ್ರೇರಿತರಾಗಿ ಬೆಂಗಾಡು ಪ್ರದೇಶಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು