Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:4 - ಕನ್ನಡ ಸತ್ಯವೇದವು C.L. Bible (BSI)

4 ಈ ಬಗ್ಗೆ ಪ್ರವಾದಿ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿಯೇ ಹೀಗೆಂದು ಬರೆದಿಡಲಾಗಿದೆ : “ ‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ’ ಎಂದು ಬೆಂಗಾಡಿನಲ್ಲಿ ಒಬ್ಬನು ಘೋಷಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4-6 ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-6 ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನಂದರೆ - ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಡೊಂಕಾಗಿರುವಂಥದು ನೀಟಾಗುವದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದ ಸಿದ್ಧವಾಗುವ ರಕ್ಷಣೆಯನ್ನು ಕಾಣುವರು ಎಂಬದಾಗಿ ಅಡವಿಯಲ್ಲಿ ಕೂಗುವವನ ಶಬ್ಧವದೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಶಾಯ ಪ್ರವಾದಿಯು ತನ್ನ ಗ್ರಂಥದಲ್ಲಿ ಬರೆದಿರುವಂತೆಯೇ ಇದು ನಡೆಯಿತು. ಅದೇನೆಂದರೆ: “‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ. ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದರ ಬಗ್ಗೆ ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿ ಹೀಗೆಂದು ಬರೆದಿದೆ: “ಅರಣ್ಯದಲ್ಲಿ ಕೂಗುವವನ ಸ್ವರವು, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಇಸಾಯಿಯಾ ಪ್ರವಾದ್ಯಾಚ್ಯಾ ಪುಸ್ತಕಾತ್: “ಡಂಗ್ಳಿತ್ ಎಕ್ಲೊ ಬೊಬ್ ಮಾರ್‍ತಾ, ಧನಿಯಾಸಾಟ್ನಿ ವಾಟ್ ತಯಾರ್ ಕರುನ್ ಥವಾ” “ತೆಕಾ ಯೆವ್ಕ್ ಎಕ್ ನಿಟ್ ವಾಟ್ ತಯಾರ್ ಕರಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:4
12 ತಿಳಿವುಗಳ ಹೋಲಿಕೆ  

ಅದಕ್ಕೆ ಯೊವಾನ್ನನು, “ಪ್ರಭುವಿನ ಮಾರ್ಗವನ್ನು ನೇರಗೊಳಿಸಿರೆಂದು ಬೆಂಗಾಡಿನಲ್ಲಿ ಕೂಗುವವನ ಸ್ವರವೇ ನಾನು,” ಎಂದು ಯೆಶಾಯ ಪ್ರವಾದಿಯ ಮಾತುಗಳಲ್ಲೇ ಉತ್ತರಕೊಟ್ಟನು.


ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿನೀಡಿದನು.


“ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ.


ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು.”


ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.


“ ‘ಸರ್ವೇಶ್ವರನಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ; ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ,’ ಎಂದೊಬ್ಬನು ಘೋಷಿಸುತ್ತಿದ್ದಾನೆ, ಬೆಂಗಾಡಿನಲ್ಲಿ.”


“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು