Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:1 - ಕನ್ನಡ ಸತ್ಯವೇದವು C.L. Bible (BSI)

1 ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದಾನೊಂದು ದಿವಸ ಜನರು ಒತ್ತಾಗಿ ಬಂದು ಆತನ ಮೇಲೆ ಬಿದ್ದುಕೊಂಡು ದೇವರ ವಾಕ್ಯವನ್ನು ಕೇಳುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ದಿಸ್ ಜೆಜು ಗೆನಜರೆತ್ ಮನ್ತಲ್ಯಾ ಸಮುಂದರಾಚ್ಯಾ ದಂಡೆಕ್ ಇಬೆ ಹೊತ್ತೊ. ದೆವಾಚಿ ಗೊಸ್ಟಿಯಾ ಆಯ್ಕುಕ್ ಲೊಕಾ ಢಕ್ಲಾ-ಢಕ್ಲಿ ಕರುನ್ ಘೆಯ್ತ್ ಗೊಳಾ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:1
21 ತಿಳಿವುಗಳ ಹೋಲಿಕೆ  

ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು.


ಅವರೆಲ್ಲರೂ ಸರೋವರವನ್ನು ದಾಟಿ ಗೆನೆಸರೇತ್ ಊರಿನ ದಡ ಸೇರಿದರು.


ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು.


ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ಹಾಗೂ ಜೋರ್ಡನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರ (ಮೃತ್ಯುಕಡಲು) ಎಣಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶ ಇವುಗಳಿಂದ ಕೂಡಿತ್ತು.


ಪಶ್ಚಿಮದಲ್ಲಿ ಅವರ ಪ್ರದೇಶ ಜೋರ್ಡನ್ ನದಿಯವರೆಗೆ ಹರಡಿತ್ತು. ಉತ್ತರದಲ್ಲಿ ಕಿನ್ನೆರೆತ್ ಸರೋವರ ಮೊದಲ್ಗೊಂಡು ದಕ್ಷಿಣದಲ್ಲಿ ಲವಣ ಸಮುದ್ರದವರೆಗೆ ವಿಸ್ತರಿಸಿತ್ತು. ಅದು ಪೂರ್ವದಲ್ಲಿ ಪಿಸ್ಗಾ ಬೆಟ್ಟದ ಬುಡದವರೆಗೆ ವ್ಯಾಪಿಸಿತ್ತು.


ಅಲ್ಲಿ0ದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು.ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್‍ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು.


ಆಗ ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದು ಕೇಳಿದರು. ಯಾರೂ ಮುಟ್ಟಲಿಲ್ಲವೆಂದು ಎಲ್ಲರು ಹೇಳುತ್ತಿರಲು ಪೇತ್ರನು, “ಪ್ರಭೂ, ಇಷ್ಟೊಂದು ಜನರು ಮೇಲೆ ಮೇಲೆ ಬೀಳುತ್ತಾ ನಿಮ್ಮನ್ನು ಒತ್ತರಿಸುತ್ತಿದ್ದಾರಲ್ಲಾ,” ಎಂದನು.


ಜೋರ್ಡನ್ ಕಣಿವೆಯಲ್ಲಿರುವ ಬೇತ್ ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ನಗರಗಳು, ಕಿನ್ನೆರೆತ್ ಸರೋವರ, (ದಕ್ಷಿಣ ದಿಕ್ಕಿನ) ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಜೋರ್ಡನ್ ಪೂರ್ವಪ್ರದೇಶ.


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು.


ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.


ಒಂದು ದಿನ ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ದೋಣಿಯನ್ನು ಹತ್ತಿ, “ಸರೋವರದ ಆಚೆಯ ದಡಕ್ಕೆ ಹೋಗೋಣ,” ಎಂದರು. ಅಂತೆಯೇ ಎಲ್ಲರೂ ಹೊರಟರು.


ದೋಣಿ ಸಾಗುತ್ತಿದ್ದಾಗ, ಯೇಸು ನಿದ್ರಾವಶರಾದರು. ಅಷ್ಟರಲ್ಲಿ ಸರೋವರದ ಮೇಲೆ ಬಿರುಗಾಳಿ ಎದ್ದಿತು. ದೋಣಿ ನೀರಿನಿಂದ ತುಂಬಿ ಅವರೆಲ್ಲರೂ ಅಪಾಯಕ್ಕೆ ಒಳಗಾದರು.


ಕೂಡಲೆ ಪಿಶಾಚಿಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಆ ಹಂದಿಗಳ ಹಿಂಡು ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ ಸರೋವರಕ್ಕೆ ಬಿದ್ದು ನೀರುಪಾಲಾಯಿತು.


ಯೊವಾನ್ನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ್ದ ಇಬ್ಬರು ಶಿಷ್ಯರಲ್ಲಿ ಸಿಮೋನ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನು.


ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು.


ದೇವರ ವಾಕ್ಯವನ್ನು ನಿಮಗೆ ಹೇಳಿಕೊಟ್ಟ ಹಿಂದಿನ ಸಭಾನಾಯಕರನ್ನು ಮರೆಯಬೇಡಿ. ಅವರು ಹೇಗೆ ಬಾಳಿದರು, ಎಂಥ ಮರಣವನ್ನು ಪಡೆದರು ಎಂಬುದನ್ನು ಕುರಿತು ಆಲೋಚಿಸಿರಿ. ಅವರ ವಿಶ್ವಾಸ ನಿಮಗೆ ಆದರ್ಶವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು