Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:24 - ಕನ್ನಡ ಸತ್ಯವೇದವು C.L. Bible (BSI)

24 ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯ ಕಡೆ ನೋಡಿ, “ ‘ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೊರಡು,’ ಎಂದು ನಿನಗೆ ಆಜ್ಞಾಪಿಸುತ್ತೇನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಪಾಪಗಳನ್ನು ಕ್ಷವಿುಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗದವನನ್ನು ನೋಡಿ - ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರ ಉಂಟೆಂಬುದು ನಿಮಗೆ ಖಚಿತವಾಗಬೇಕು” ಎಂದು ಹೇಳಿ, ಪಾರ್ಶ್ವವಾಯು ರೋಗಿಗೆ, “ಏಳು! ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ಮನೆಗೆ ಹೋಗು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಸೆ ಜಾಲ್ಯಾರ್, ಮಾನ್ಸಾಚ್ಯಾ ಲೆಕಾಕ್ ಹ್ಯಾ ಜಗಾತ್ ಪಾಪ್ ಮಾಪಿ ಕರ್‍ತಲೊ ಅದಿಕಾರ್‍ಬಿ ಹಾಯ್, ಮನುನ್ ಮಿಯಾ ತುಮ್ಕಾ ದಾಕ್ವುನ್ ದಿತಾ. ಮನುನ್ ತ್ಯಾ ವಾರೆಮಾರಲ್ಲ್ಯಾಕ್, ತೆನಿ “ಮಿಯಾ ಸಾಂಗ್ತಾ ಉಟ್, ಘೆ ತುಜೆ ಹಾತ್ರಾನ್, ಅನಿ ಘರಾಕ್ ಚಲ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:24
26 ತಿಳಿವುಗಳ ಹೋಲಿಕೆ  

ಆ ದೀಪಸ್ತಂಭಗಳ ನಡುವೆ ‘ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


“ಎದ್ದೇಳು, ಕಾಲೂರಿ ನೆಟ್ಟಗೆ ನಿಲ್ಲು,” ಎಂದು ಹೇಳಿದನು. ಆ ಮನುಷ್ಯನು ನೆಗೆದುನಿಂತು ನಡೆಯಲಾರಂಭಿಸಿದನು.


ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು.


ಪೇತ್ರನು ಅವನಿಗೆ, “ಐನೇಯಾ, ಯೇಸುಕ್ರಿಸ್ತರು ನಿನ್ನನ್ನು ಸ್ವಸ್ಥಪಡಿಸುತ್ತಾರೆ, ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು,” ಎಂದನು. ಆ ಕ್ಷಣವೇ ಅವನು ಎದ್ದನು.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು.


ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.


ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


ಯೇಸು ಅವಳ ಕೈಹಿಡಿದು, “ಮಗೂ, ಎದ್ದೇಳು,” ಎಂದು ಕೂಗಿ ಹೇಳಿದರು.


ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು.


ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ; ನಿನಗೆ ಗುಣವಾಗಲಿ,” ಎಂದರು. ತಕ್ಷಣವೇ ಕುಷ್ಠವು ಮಾಯವಾಗಿ ಅವನು ಗುಣಹೊಂದಿದನು.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.


ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.


ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆಯೇ ಇಡಬೇಕೆಂದು ಪ್ರಯತ್ನಿಸಿದರು.


‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು