Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:2 - ಕನ್ನಡ ಸತ್ಯವೇದವು C.L. Bible (BSI)

2 ಅದನ್ನು ಕಂಡ ಫರಿಸಾಯರಲ್ಲಿ ಕೆಲವರು, “ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನೀವು ಮಾಡುವುದೇಕೆ?” ಎಂದು ಅವರನ್ನು ಆಕ್ಷೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದರೆ ಫರಿಸಾಯರಲ್ಲಿ ಕೆಲವರು - ಸಬ್ಬತ್‍ದಿನದಲ್ಲಿ ಮಾಡಬಾರದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ ಎಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೆಲವು ಫರಿಸಾಯರು, “ನೀವು ಸಬ್ಬತ್‌ದಿನದಲ್ಲಿ ಹೀಗೆ ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫರಿಸಾಯರಲ್ಲಿ ಕೆಲವರು ಅವರಿಗೆ, “ಸಬ್ಬತ್ ದಿನದಲ್ಲಿ ಮೋಶೆಯ ನಿಯಮಕ್ಕೆ ವಿರುದ್ಧವಾಗಿರುವದನ್ನು ನೀವು ಏಕೆ ಮಾಡುತ್ತೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಉಲ್ಲ್ಯಾ ಫಾರಿಜೆವಾನಿ “ಸಬ್ಬತಾಚ್ಯಾ ದಿಸಿ ಕರುಚೆ ನ್ಹಯ್ ಮನುನ್ ಅಮ್ಚೊ ಖಾಯ್ದೊ ಸಾಂಗಲ್ಲೆ ತುಮಿ ಕಶ್ಯಾಕ್ ಕರುಕ್ ಲಾಗ್ಲ್ಯಾಶಿ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:2
14 ತಿಳಿವುಗಳ ಹೋಲಿಕೆ  

ಇದನ್ನು ಕಂಡ ಫರಿಸಾಯರು, “ನೋಡು, ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಷಿದ್ಧವಾದುದನ್ನು ಮಾಡುತ್ತಿದ್ದಾರೆ,” ಎಂದರು.


ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.


ಇದನ್ನು ಕಂಡ ಫರಿಸಾಯರು,, “ನೋಡು, ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು.


“ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು.


“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ಆರು ದಿನಗಳು ದುಡಿಯಬೇಕು. ಏಳನೆಯ ದಿನ ಪರಿಶುದ್ಧವಾದ ದಿನ. ಅದು ಸರ್ವೇಶ್ವರನಿಗೆ ಮೀಸಲಾದ ಸಬ್ಬತ್ ದಿನ. ಆದ್ದರಿಂದ ನೀವು ಸಂಪೂರ್ಣವಾಗಿ ದುಡಿಮೆ ನಿಲ್ಲಿಸಬೇಕು. ಆ ದಿನ ದುಡಿಯುವವನಿಗೆ ಮರಣದಂಡನೆಯಾಗಬೇಕು.


ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.


“ಒಬ್ಬನು ಮತ್ತೊಬ್ಬನ ಕತ್ತೆಯನ್ನಾಗಲಿ ಎತ್ತನ್ನಾಗಲಿ ಕುರಿಯನ್ನಾಗಲಿ, ಬೇರೆ ಯಾವ ಪ್ರಾಣಿಯನ್ನೇ ಆಗಲಿ ತನ್ನ ಬಳಿಯಿಂದ ಸುರಕ್ಷಿತವಾಗಿಟ್ಟುಕೊಳ್ಳಲು ಒಪ್ಪಿಕೊಂಡ ಮೇಲೆ ಅದು ಸತ್ತರೆ, ಗಾಯಗೊಂಡರೆ, ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ


“ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಸಂಪ್ರದಾಯಗಳನ್ನು ಮೀರುವುದೇಕೆ? ಅವರು ಊಟಕ್ಕೆ ಮುಂಚೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದೇಕೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು