Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:21 - ಕನ್ನಡ ಸತ್ಯವೇದವು C.L. Bible (BSI)

21 ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹಸಿವೆಗೊಂಡಿರುವ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಅಳುತ್ತಿರುವ ನೀವು ಧನ್ಯರು; ಆನಂದದಿಂದ ನೀವು ನಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈಗ ಹಸಿದವರಾದ ನೀವು ಧನ್ಯರು, ನೀವು ತೃಪ್ತಿಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು, ನೀವು ನಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅತ್ತಾ ಉಪ್ಪಾಸಿ ಹೊತ್ತ್ಯಾನೊ ತುಮಿ ಸುಖಿ; ತುಮ್ಕಾ ಭರ್‍ಪುರ್ ಗಾವ್ತಾ! ಅತ್ತಾ ರಡ್ತಲ್ಯಾನೊ ತುಮಿ ಕವ್ಡೆ ಸುಖಿ; ತುಮಿ ಹಾಸ್ತ್ಯಾಶಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:21
56 ತಿಳಿವುಗಳ ಹೋಲಿಕೆ  

ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.


ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II


ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.


ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.


ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ.


ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ.


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ಬಾಯಾರಿದವರ ಆಸೆಯನ್ನಾತ ಪೂರೈಸಿದನು I ಹಸಿದವರನು ಮೃಷ್ಟಾನ್ನದಿಂದ ತೃಪ್ತಿಪಡಿಸಿದನು II


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ಸಾರಳು ಇಂತೆಂದುಕೊಂಡಳು: “ತಂದಿಹನಿದೋ ಎನಗೊಂದು ‘ನಗು’ವನು ಆ ದೇವನು, ನಕ್ಕು ನಲಿವರೆನ್ನೊಡನೆ ಇದನು ಕೇಳುವವರೆಲ್ಲರು.”


ಅಬ್ರಹಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ಆದರೆ, "ನೂರು ವರ್ಷದವನಿಗೆ ಮಗ ಹುಟ್ಟುವುದುಂಟೆ? ತೊಂಬತ್ತು ವರ್ಷದವಳಾದ ಸಾರಳು ಹೆತ್ತಾಳೆ?” ಎಂದು ಅಬ್ರಹಾಮನು ಮನಸ್ಸಿನಲ್ಲೇ ನೆನೆದು ನಕ್ಕು ದೇವರಿಗೆ,


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.


ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ಯೇಸು ಕಣ್ಣೀರಿಟ್ಟರು.


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II


ನಿನ್ನ ಶಾಸ್ತ್ರವನು ಜನ ಪಾಲಿಸದ ಕಾರಣ I ಹರಿಯುತ್ತಿದೆ ಧಾರೆಯಾಗಿ ನನ್ನ ಕಣ್ಕಣ II


ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II


ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು.


ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು