Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:47 - ಕನ್ನಡ ಸತ್ಯವೇದವು C.L. Bible (BSI)

47 ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ, ಅದರಂತೆ ನಡೆಯುವ ಪ್ರತಿಯೊಬ್ಬನೂ ಎಂಥವನಿಗೆ ಸಮಾನನೆಂದು ನಿಮಗೆ ಹೇಳುತ್ತೇನೆ ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಯಾರಿಗೆ ಸಮಾನನೆಂಬದನ್ನು ನಿಮಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ, ಅವುಗಳಿಗೆ ವಿಧೇಯನಾಗುವ ಪ್ರತಿಯೊಬ್ಬನು ಮನೆಯನ್ನು ಕಟ್ಟುವ ವ್ಯಕ್ತಿಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಯಾರು ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ ಅದರಂತೆ ನಡೆಯುತ್ತಾರೋ, ಅಂಥವರು ಯಾರಿಗೆ ಸಮಾನರಾಗಿದ್ದಾರೆಂದು ನಾನು ನಿಮಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಕೊನ್ಬಿ ಎಕ್ಲೊ ಮಾಜ್ಯಾ ವಾಂಗ್ಡಾ ಯೆತಾ ಅನಿ ಮಿಯಾ ಸಾಂಗಟಲ್ಲೆ ಆಯಿಕ್ತಾ ಅನಿ ಮಾಜ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊತಾ ತೊ ಕೊನ್ ಮನುನ್ ಮಿಯಾ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:47
30 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ಒಬ್ಬನು ಒಳ್ಳೆಯದನ್ನು ಮಾಡಬೇಕೆಂದು ತಿಳಿದಿದ್ದೂ ಅದನ್ನು ಮಾಡದಿದ್ದರೆ ಅದು ಅವನಿಗೆ ಪಾಪವಾಗಿರುತ್ತದೆ.


ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.


ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.


ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.


ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು