Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:49 - ಕನ್ನಡ ಸತ್ಯವೇದವು C.L. Bible (BSI)

49 ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ನೆಲದ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಬಡಿಯಿತು; ಬಡಿದ ಕೂಡಲೆ ಅದು ಕುಸಿದುಬಿದ್ದು ಪೂರಾ ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 “ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆದರೆ ನನ್ನ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದೆ ಇರುವವರು, ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೆ ಕಟ್ಟಿದವರಿಗೆ ಹೋಲಿಕೆಯಾಗಿದ್ದಾರೆ. ಪ್ರವಾಹವು ಆ ಮನೆಗೆ ಅಪ್ಪಳಿಸಿದಾಗ, ಕೂಡಲೇ ಅದು ಕುಸಿದು ಬಿತ್ತು. ಹೀಗೆ ಆ ಮನೆಯು ಸರ್ವನಾಶವಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಖರೆ ಮಿಯಾ ಸಾಂಗಟಲ್ಲ್ಯಾ ಗೊಸ್ಟಿಯಾ ಆಯ್ಕುನ್ ತೆಚೆ ಸಾರ್ಕೆ ಚಲಿನಸಲ್ಲೊ ಪಾಯಾ ಭರಿನಸ್ತಾನಾ ಮಾಟಿ ವರ್‍ತಿ ಘರ್ ಭಾಂದ್ತಲ್ಯಾ ಮಾನ್ಸಾ ಬಾಸೆನ್,ನ್ಹಯ್ ಭರುನ್ ಪಾನಿ ಯೆತಾ ಅನಿ ತ್ಯಾ ಘರಾಕ್ ಮಾರ್‍ತಾ ಅನಿ ತೆ ಘರ್ ಕೊಸ್ಳುನ್ ಪಡುನ್ ಜಾತಾ ಅನಿ ಸಗ್ಳೆಚ್ ನಾಸ್ ಹೊವ್ನ್ ಜಾತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:49
30 ತಿಳಿವುಗಳ ಹೋಲಿಕೆ  

ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ.


ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


“ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.


“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?


ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು.


ನಮ್ಮ ಪ್ರಭು ಹಾಗೂ ಉದ್ಧಾರಕರಾದ ಯೇಸುಕ್ರಿಸ್ತರನ್ನು ಕುರಿತ ಜ್ಞಾನದ ಮೂಲಕ ಕೆಲವರು ಲೋಕದ ಕಲ್ಮಶದಿಂದ ಪಾರಾಗಿ ನಿರ್ಮಲರಾಗುತ್ತಾರೆ. ಇಂಥವರು ಮರಳಿ ಅದರಲ್ಲೇ ಸಿಲುಕಿಕೊಂಡು ಅದಕ್ಕೆ ಗುಲಾಮರಾದರೆ ಅವರ ಅಂತಿಮ ಗತಿ ಮೊದಲ ಗತಿಗಿಂತಲೂ ಅಧೋಗತಿಯಾಗಿರುತ್ತದೆ.


ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.


ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿಮಾಡದೆ ಬಿಡವು.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.


ಆ ದಿನಗಳಲ್ಲಿ ಬಹುಮಂದಿ ವಿಶ್ವಾಸಭ್ರಷ್ಟರಾಗುವರು, ಒಬ್ಬರಿಗೊಬ್ಬರು ದ್ರೋಹ ಬಗೆಯುವರು. ಒಬ್ಬರನ್ನೊಬ್ಬರು ದ್ವೇಷಿಸುವರು.


ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.


ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು.


ಜನರಿಗೆ ಮನಮುಟ್ಟುವಂತೆ ಬೋಧನೆಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು