Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:40 - ಕನ್ನಡ ಸತ್ಯವೇದವು C.L. Bible (BSI)

40 ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅದಕ್ಕೆ ಯೇಸು - ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ ಅಂದಾಗ ಅವನು - ಬೋಧಕನೇ, ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಅದಕ್ಕೆ ಯೇಸು ಫರಿಸಾಯನಿಗೆ, “ಸಿಮೋನನೇ, ನಾನು ನಿನಗೆ ಒಂದು ವಿಷಯವನ್ನು ಹೇಳಬೇಕಾಗಿದೆ” ಎಂದನು. ಸಿಮೋನನು, “ಗುರುವೇ, ಹೇಳು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆಗ ಯೇಸು ಅವನಿಗೆ, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ವಿಷಯವಿದೆ,” ಎಂದರು. ಸೀಮೋನನು ಯೇಸುವಿಗೆ, “ಗುರುವೇ, ಹೇಳಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಜೆಜುನ್ ತೆಕಾ “ಸಿಮಾವ್, ಮಿಯಾ ತುಕಾ ಕಾಯ್ಕಿ ಸಾಂಗುಕ್ ಪಾಜೆ” ಮಟ್ಲ್ಯಾನ್. ತನ್ನಾ ತೆನಿ “ಸಾಂಗ್ ಧನಿಯಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:40
16 ತಿಳಿವುಗಳ ಹೋಲಿಕೆ  

ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು.


ಯೇಸು, ತಮ್ಮಲ್ಲಿ ಅವರು ವಿಚಾರಿಸಬೇಕೆಂದಿದ್ದಾರೆಂದು ತಿಳಿದುಕೊಂಡು, ‘ತುಸುಕಾಲದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ’ ಎಂದು ನಾನು ಹೇಳಿದ್ದನ್ನು ಕುರಿತು ನಿಮ್ಮನಿಮ್ಮಲ್ಲಿಯೇ ನೀವು ಚರ್ಚಿಸುತ್ತಿರುವುದೇನು?


‘ಬೋಧಕರೇ, ಪ್ರಭುವೇ’ ಎಂದು ನೀವು ನನ್ನನ್ನು ಕರೆಯುತ್ತೀರಿ; ನೀವು ಹಾಗೆ ಹೇಳುವುದು ಸರಿಯೆ. ನಾನು ಬೋಧಕನೂ ಹೌದು, ಪ್ರಭುವೂ ಹೌದು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ಅಧಿಕಾರಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, “ಒಳ್ಳೆಯ ಗುರುವೇ, ಅಮರಜೀವ ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.


ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ವೈದ್ಯನ ಅವಶ್ಯಕತೆಯಿರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ;


ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು?


ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಅದರಂತೆಯೇ ಅವನು ಯೇಸುಸ್ವಾಮಿಯ ಸಮೀಪಕ್ಕೆ ನೇರವಾಗಿ ಬಂದು, “ಗುರುವೇ, ನಮಸ್ಕಾರ,” ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.


ಆಗ ಯೇಸು, “ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು.


ಆಮೇಲೆ ಅವನು, “ನಿಮಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ,” ಎನ್ನಲು ಆಕೆ, “ಹೇಳು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು