Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:23 - ಕನ್ನಡ ಸತ್ಯವೇದವು C.L. Bible (BSI)

23 ದೋಣಿ ಸಾಗುತ್ತಿದ್ದಾಗ, ಯೇಸು ನಿದ್ರಾವಶರಾದರು. ಅಷ್ಟರಲ್ಲಿ ಸರೋವರದ ಮೇಲೆ ಬಿರುಗಾಳಿ ಎದ್ದಿತು. ದೋಣಿ ನೀರಿನಿಂದ ತುಂಬಿ ಅವರೆಲ್ಲರೂ ಅಪಾಯಕ್ಕೆ ಒಳಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು; ಅಷ್ಟರಲ್ಲಿ ಬಿರುಗಾಳಿ ಕೆರೆಯ ಮೇಲೆ ಬರಲು ದೋಣಿಯೊಳಗೆ ನೀರು ತುಂಬಿಕೊಂಡದರಿಂದ ಅವರು ಅಪಾಯಕ್ಕೆ ಗುರಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವರು ಸರೋವರದ ಮೇಲೆ ದೋಣಿಯಲ್ಲಿ ಹೋಗುತ್ತಿರುವಾಗ ಯೇಸುವಿಗೆ ನಿದ್ದೆ ಹತ್ತಿತು. ಇತ್ತ ಸರೋವರದ ಮೇಲೆ ಬಿರುಗಾಳಿ ಬೀಸತೊಡಗಿತು. ದೋಣಿಯೊಳಗೆ ನೀರು ತುಂಬತೊಡಗಿತು. ದೋಣಿಯಲ್ಲಿದ್ದವರೆಲ್ಲರೂ ಅಪಾಯಕ್ಕೀಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅವರು ಪ್ರಯಾಣ ಮಾಡುತ್ತಿದ್ದಾಗ, ಯೇಸು ನಿದ್ರಿಸುತ್ತಿದ್ದರು. ಆಗ ಬಿರುಗಾಳಿಯು ಸರೋವರದ ಮೇಲೆ ಬೀಸಲು, ದೋಣಿಯು ನೀರಿನಿಂದ ತುಂಬಿದ್ದರಿಂದ, ಅವರು ಅಪಾಯಕ್ಕೊಳಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆನಿ ಜಾವ್ನಗೆತ್ ರಾತಾನಾ ಜೆಜುಕ್ ನಿಜ್‍ಲಾಗ್ಲಿ ತನ್ನಾ ಸಮುಂದರಾತ್ ಎಗ್ದಮ್ ಮೊಟೊ ವಾರೊ ಉಟ್ಲೊ, ಅನಿ ಢೊನಿತ್ ಪಾನಿ ಭರುಕ್‍ಲಾಲೆ,ಅಶೆ ತೆನಿ ಮೊಟ್ಯಾ ಅಪಾಯಾತ್ ಪಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:23
13 ತಿಳಿವುಗಳ ಹೋಲಿಕೆ  

ಒಂದು ದಿನ ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ದೋಣಿಯನ್ನು ಹತ್ತಿ, “ಸರೋವರದ ಆಚೆಯ ದಡಕ್ಕೆ ಹೋಗೋಣ,” ಎಂದರು. ಅಂತೆಯೇ ಎಲ್ಲರೂ ಹೊರಟರು.


“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.


ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II


ಪ್ರಭೂ, ಎದ್ದೇಳು, ನಿದ್ರಿಸಬೇಡ I ನಮ್ಮನು ಎಂದೆಂದಿಗೂ ತೊರೆಯಬೇಡ II


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.


ಆಗ ಅದ್ರಮಿತಿಯದಿಂದ ಬಂದು ಏಷ್ಯಾ ಪ್ರಾಂತ್ಯದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ಹಡಗನ್ನು ಹತ್ತಿ ನಾವು ಪ್ರಯಾಣ ಬೆಳೆಸಿದೆವು. ಥೆಸಲೋನಿಕದಿಂದ ಬಂದ ಮಕೆದೋನಿಯದ ಅರಿಸ್ತಾರ್ಕ ನಮ್ಮ ಸಂಗಡ ಇದ್ದನು.


ನಾವು ಕೂಡ ಏಕೆ ಪ್ರತಿಕ್ಷಣದಲ್ಲಿಯೂ ಆಪತ್ತು ವಿಪತ್ತುಗಳನ್ನು ಎದುರಿಸುತ್ತಿದ್ದೇವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು