Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:24 - ಕನ್ನಡ ಸತ್ಯವೇದವು C.L. Bible (BSI)

24 ಶಿಷ್ಯರು ಬಂದು ಯೇಸುವನ್ನು ಎಬ್ಬಿಸಿ, “ಸ್ವಾಮೀ, ಸ್ವಾಮೀ, ನಾವು ಸಾಯುತ್ತಿದ್ದೇವೆ,” ಎಂದರು. ಯೇಸು ಎಚ್ಚೆತ್ತು ಬಿರುಗಾಳಿಯನ್ನೂ ಭೋರ್ಗರೆಯುತ್ತಿದ್ದ ಅಲೆಗಳನ್ನೂ ಗದರಿಸಿದರು. ಅವು ಸ್ತಬ್ಧವಾದವು. ವಾತಾವರಣ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೀಗಿರಲಾಗಿ ಅವರು ಆತನ ಹತ್ತಿರ ಬಂದು - ಗುರುವೇ, ಗುರುವೇ, ಸಾಯುತ್ತೇವೆ ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಉಬ್ಬುವ ನೀರನ್ನೂ ಗದರಿಸಿದನು. ಗದರಿಸಲು ಅವು ನಿಂತವು, ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಗುರುವೇ, ಗುರುವೇ, ನಾವು ಮುಳುಗುತ್ತಿದ್ದೇವೆ!” ಎಂದರು. ಆಗ ಯೇಸು ಎದ್ದು ಬಿರುಗಾಳಿಯನ್ನೂ ರಭಸವಾಗಿ ಬರುತ್ತಿದ್ದ ಅಲೆಗಳನ್ನೂ ಗದರಿಸಿದರು; ಆಗ ಬಿರುಗಾಳಿಯು ನಿಂತು ಹೋಗಿ, ಎಲ್ಲಾ ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಶಿಸಾ ಜೆಜುಕ್ ಗೆಲಿ ಅನಿ ತೆಕಾ ಉಟ್ವುನ್ “ಗುರುಜಿ, ಗುರುಜಿ, ಅಮಿ ಬುಡುನ್ ಮರ್‍ತಾಂವ್?” ಮನುಲಾಲೆ. ತನ್ನಾ ಜೆಜು ಉಟ್ಲೊ, ಅನಿ ವಾರ್ಯಾಕ್, ಅನಿ ಲ್ಹಾಟಾಕ್ನಿ ತೆನಿ ಹುಕುಮ್ ದಿಲ್ಯಾನ್. ತನ್ನಾ ವಾರೊ ಅನಿ ಲ್ಹಾಟಾ ಗಪ್ ರ್‍ಹಾಲಿ, ಅನಿ ಸಗ್ಳೆ ಎಗ್ದಮ್ ಶಾಂತ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:24
19 ತಿಳಿವುಗಳ ಹೋಲಿಕೆ  

ಯೇಸು ಆಕೆಯ ಬಳಿ ನಿಂತು, ಬಾಗಿ, ಜ್ವರಕ್ಕೆ ಬಿಟ್ಟುಹೋಗೆಂದು ಆಜ್ಞಾಪಿಸಿದರು; ಅದು ಬಿಟ್ಟುಹೋಯಿತು. ಆ ಕ್ಷಣವೇ ಆಕೆ ಎದ್ದು ಅವರೆಲ್ಲರನ್ನು ಸತ್ಕರಿಸಿದಳು.


ಅದಕ್ಕೆ ಸಿಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕುತ್ತೇವೆ,” ಎಂದನು.


ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.


ಭೋರ್ಗರೆವ ಸಮುದ್ರಗಳನು, ಗರ್ಜಿಸುವ ತರಂಗಗಳನು I ದೊಂಬಿಯೇಳುವ ಜನಾಂಗಗಳನು ಶಮನಗೊಳಿಸುವವನು ನೀನು II


ಆದರೆ ಬಲವಾದ ಗಾಳಿ ಬೀಸುತ್ತಿರುವುದನ್ನು ಕಂಡು ಹೆದರಿದನು. ಹಾಗೆಯೇ ಮುಳುಗಿಹೋಗಲಾರಂಭಿಸಿದನು. ಆಗ, “ಸ್ವಾಮೀ, ಕಾಪಾಡಿ, ಕಾಪಾಡಿ,” ಎಂದು ಕೂಗಿಕೊಂಡನು.


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಶಿಷ್ಯರು ಹತ್ತಿರಕ್ಕೆ ಬಂದು ಅವರನ್ನು ಎಬ್ಬಿಸಿ, “ಸ್ವಾಮೀ, ಕಾಪಾಡಿ. ನಾವು ನೀರುಪಾಲಾಗುತ್ತಿದ್ದೇವೆ,” ಎಂದರು.


ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು.


ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು.


ಆಗ ಯೇಸು ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ವಿಶ್ವಾಸ?” ಎಂದು ಪ್ರಶ್ನಿಸಿದರು. ಶಿಷ್ಯರು ಭಯಭೀತರಾಗಿ, ‘ಗಾಳಿಗೂ ನೀರಿಗೂ ಆಜ್ಞೆಕೊಡುವ ಇವರು ಯಾರಿರಬಹುದು! ಅವು ಇವರು ಹೇಳಿದ ಹಾಗೆ ಕೇಳುತ್ತವೆಯಲ್ಲಾ!’ ಎಂದು ಸೋಜಿಗದಿಂದ ತಮ್ಮತಮ್ಮೊಳಗೇ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು