Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:27 - ಕನ್ನಡ ಸತ್ಯವೇದವು C.L. Bible (BSI)

27 ಯೇಸು ದಡದ ಮೇಲೆ ಕಾಲಿಟ್ಟದ್ದೇ ತಡ, ಆ ಊರಿನವನೊಬ್ಬನು ಬಂದು ಅವರನ್ನು ಎದುರುಗೊಂಡನು. ಅವನಿಗೆ ಪಿಶಾಚಿ ಹಿಡಿದಿತ್ತು. ಅವನು ಬಟ್ಟೆತೊಟ್ಟು ಬಹಳ ದಿನಗಳಾಗಿತ್ತು; ಮನೆ ಬಿಟ್ಟು ಸಮಾಧಿಗಳ ಗುಹೆಗಳಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಬಹುಕಾಲದಿಂದ ಬಟ್ಟೆಯನ್ನೇ ಹಾಕಿಕೊಳ್ಳದೆ ಯಾವ ಮನೆಯಲ್ಲಿಯೂ ಇರದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೇಸು ದೋಣಿಯಿಂದ ಇಳಿದಾಗ, ಆ ಪಟ್ಟಣದ ಮನುಷ್ಯನೊಬ್ಬನು ಯೇಸುವಿನ ಬಳಿಗೆ ಬಂದನು. ಈ ಮನುಷ್ಯನಿಗೆ ದೆವ್ವ ಹಿಡಿದಿತ್ತು. ಬಹಳ ಕಾಲದಿಂದ ಅವನು ಬಟ್ಟೆಯನ್ನೇ ಹಾಕಿಕೊಂಡಿರಲಿಲ್ಲ. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ದಡಕ್ಕೆ ಸೇರಿದಾಗ, ಬಹುಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆ ಯಾವ ಮನೆಯಲ್ಲಿ ಇರದೆ ಸಮಾಧಿಯ ಗುಹೆಗಳಲ್ಲಿ ವಾಸಿಸುತ್ತಿದ್ದ ಒಬ್ಬ ಮನುಷ್ಯನನ್ನು ಯೇಸು ಸಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜೆಜು ಢೊನಿತ್ನಾ ದಂಡೆಕ್ ಉತರಲ್ಲ್ಯಾ ತನ್ನಾಚ್, ತ್ಯಾ ಗಾಂವಾತ್ಲ್ಯಾ ಗಿರೆ ಲಾಗಲ್ಲ್ಯಾ ಎಕ್ ಮಾನ್ಸಾಕ್ ತೊ ಭೆಟ್ಲೊ. ಲೈ ದಿಸಾಕ್ನಾ ತೊ ಮಾನುಸ್ ಆಂಗಾರ್ ಕಪ್ಡೆನಸ್ತಾನಾ ಫಿರಿ, ಅನಿ ಘರಾತ್ ರೈನಸಿ, ಲೊಕಾಕ್ನಿ ಮಾಟಿ ದಿತಲ್ಯಾ ಢೊಂಬಾತ್ನಿಚ್ ತೊ ರೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:27
8 ತಿಳಿವುಗಳ ಹೋಲಿಕೆ  

ಅಲ್ಲಿಗೆ ಸೇರಿದ ಮೇಲೆ, ಅವನೂ ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದುದರಿಂದ “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೋ?” ಎಂಬ ಗಾದೆಯುಂಟಾಯಿತು.


ಹೊರಗೆ ಬಯಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ, ಬೇರೆ ಯಾವ ಮಾನುಷ್ಯ ಶವವಾಗಲಿ, ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾರೆ, ಗುಪ್ತಸ್ಥಳಗಳಲ್ಲಿ ರಾತ್ರಿಯನ್ನು ಕಳೆಯುತ್ತಾರೆ, ಹಂದಿಯ ಮಾಂಸವನ್ನು ತಿನ್ನುತ್ತಾರೆ, ಅಸಹ್ಯ ಪದಾರ್ಥಗಳ ಸಾರವನ್ನು ತಟ್ಟೆಗಳಲ್ಲಿ ಬಡಿಸಿಕೊಳ್ಳುತ್ತಾರೆ.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು.


ಯೇಸುಸ್ವಾಮಿ ಮತ್ತು ಶಿಷ್ಯರು ದೋಣಿಯಲ್ಲೇ ಮುಂದೆ ಸಾಗಿ ಗಲಿಲೇಯಕ್ಕೆ ಎದುರಾಗಿದ್ದ ಗೆರಸೇನರ ನಾಡಿಗೆ ಬಂದು ಸೇರಿದರು.


ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು