Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:33 - ಕನ್ನಡ ಸತ್ಯವೇದವು C.L. Bible (BSI)

33 ಕೂಡಲೆ ಪಿಶಾಚಿಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಆ ಹಂದಿಗಳ ಹಿಂಡು ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ ಸರೋವರಕ್ಕೆ ಬಿದ್ದು ನೀರುಪಾಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆ ಕೊಡಲು ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸುರುಕಟ್ಟಿ ಸತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆಗ ದೆವ್ವಗಳು ಆ ಮನುಷ್ಯನಿಂದ ಹೊರಬಂದು ಹಂದಿಗಳೊಳಗೆ ಸೇರಿಕೊಂಡವು. ಆ ಕೂಡಲೇ ಹಂದಿಗಳ ಗುಂಪು ಗುಡ್ಡದ ಕೆಳಗೆ ಓಡಿಹೋಗಿ ಸರೋವರದಲ್ಲಿ ಬಿದ್ದು ಮುಳುಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು, ಹಂದಿಗಳೊಳಗೆ ಸೇರಿದವು. ಆ ಗುಂಪು ಚುರುಕಾಗಿ ಓಡಿ, ಕಡಿದಾದ ಬದಿಯಿಂದ ಸರೋವರಕ್ಕೆ ಬಿದ್ದು ಮುಳುಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತೆನಿ ತ್ಯಾ ಮಾನ್ಸಾಕ್ ಸೊಡುನ್ ಡುಕ್ರಾತ್ನಿ ಜಾವ್ನ್ ಗುಸ್ಲ್ಯಾನಿ, ಡುಕ್ರಾಂಚೊ ಸಗ್ಳೊ ಹಿಂಡ್ ಮಡ್ಡಿ ವೈನಾ ಪಾನಿಯಾತ್ ಪಡುನ್ ಬುಡುನ್ ಮರುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:33
8 ತಿಳಿವುಗಳ ಹೋಲಿಕೆ  

ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಯೇಸು, “ಹೋಗಿ” ಎಂದು ಅಪ್ಪಣೆಯಿತ್ತರು. ದೆವ್ವಗಳು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆ ಕ್ಷಣವೇ ಆ ಹಿಂಡೆಲ್ಲಾ ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ, ಸರೋವರಕ್ಕೆ ಬಿದ್ದು, ನೀರುಪಾಲಾಗಿಹೋಯಿತು.


ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.


ಸಮೀಪದಲ್ಲೇ, ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಿನಲ್ಲಿ ಮೇಯುತ್ತಿತ್ತು. ಆ ಹಂದಿಗಳೊಳಗೆ ಸೇರಿಕೊಳ್ಳಲು ತಮಗೆ ಅಪ್ಪಣೆಯಾಗಬೇಕೆಂದು ಆ ಪಿಶಾಚಿಗಳು ಯೇಸುವನ್ನು ಬೇಡಿಕೊಂಡವು. ಅವರು ಹಾಗೇ ಅಪ್ಪಣೆಮಾಡಿದರು.


ಇದನ್ನು ನೋಡಿದೊಡನೆಯೇ, ಹಂದಿ ಮೇಯಿಸುತ್ತಿದ್ದವರು ಓಡಿಹೋಗಿ ನಡೆದ ಈ ಘಟನೆಯನ್ನು ಪಟ್ಟಣದಲ್ಲೂ ಹಳ್ಳಿಯಲ್ಲೂ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು