Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:6 - ಕನ್ನಡ ಸತ್ಯವೇದವು C.L. Bible (BSI)

6 ಮತ್ತೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು. ಅವು ಮೊಳೆತಾಗಲೂ ತೇವವಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬೇರೆ ಕೆಲವು ಬೀಜ ಬಂಡೆಯ ಮೇಲೆ ಬಿದ್ದವು; ಅವು ಮೊಳೆತು ತ್ಯಾವವಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವುಗಳು ಮೊಳೆಯತೊಡಗಿದರೂ ನೀರಿಲ್ಲದೆ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು, ಅವು ಮೊಳೆತ ಕೂಡಲೇ ತೇವ ಇಲ್ಲದಿರುವ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತ್ಯಾತುರ್‍ಲೆ ಅನಿ ಉಲ್ಲೆ ಗುಂಡಾಡ್ ಜಿಮ್ನಿ ವರ್‍ತಿ ಪಡ್ಲೆ, ಅನಿ ಝಾಡಾ ವಾಳುನ್ ಗೆಲಿ, ಕಶ್ಯಾಕ್ ಮಟ್ಲ್ಯಾರ್ ಥೈ ಥಂಡ್ ಕಮಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:6
14 ತಿಳಿವುಗಳ ಹೋಲಿಕೆ  

ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


“ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು ಮರುಭೂಮಿಯಲಿ ದೇವರ ವಿರುದ್ಧ ದಂಗೆಯೆದ್ದವರವರು.”


ಕಲ್ಲುಬಂಡೆಗಳ ಮೇಲೆ ಕುದುರೆಗಳು ಓಡಾಡುವುದುಂಟೋ? ಎತ್ತು ಹೋರಿಗಳಿಂದ ಕಡಲನ್ನು ಉಳುವುದುಂಟೋ? ನೀವೋ, ವಿಷವನ್ನಾಗಿಸಿದ್ದೀರಿ ನ್ಯಾಯನೀತಿಯನ್ನು, ಕಹಿಯಾಗಿಸಿದ್ದೀರಿ ಧರ್ಮದ ಸತ್ಫಲವನ್ನು.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


“ಒಬ್ಬ ರೈತನು ಬಿತ್ತುವುದಕ್ಕೆ ಹೋದನು. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಅವು ಕಾಲ್ತುಳಿತಕ್ಕೆ ಸಿಕ್ಕಿಹೋದವು. ಅವುಗಳನ್ನು ಆಕಾಶದ ಪಕ್ಷಿಗಳು ತಿಂದುಬಿಟ್ಟವು.


ಇನ್ನೂ ಕೆಲವು ಮುಳ್ಳು ಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಅವುಗಳೊಡನೆ ಬೆಳೆದು ಸಸಿಗಳನ್ನು ಅದುಮಿಬಿಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು