Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:10 - ಕನ್ನಡ ಸತ್ಯವೇದವು C.L. Bible (BSI)

10 ಇತ್ತ ಪ್ರೇಷಿತರು ಹಿಂದಿರುಗಿ ಬಂದು ತಾವು ಮಾಡಿದ್ದೆಲ್ಲವನ್ನೂ ಯೇಸುಸ್ವಾಮಿಗೆ ವರದಿಮಾಡಿದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೆತ್ಸಾಯಿದ ಎಂಬ ಊರಿನತ್ತ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಲು ಆತನು ಅವರನ್ನು ಬೇತ್ಸಾಯಿದವೆಂಬ ಊರಿಗೆ ವಿಂಗಡವಾಗಿ ಕರಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅಪೊಸ್ತಲರು ಹಿಂದಿರುಗಿ ಬಂದು, ತಾವು ಮಾಡಿದವುಗಳನ್ನೆಲ್ಲಾ ಯೇಸುವಿಗೆ ತಿಳಿಸಿದರು. ಆಗ ಯೇಸು ಬೇತ್ಸಾಯಿದ ಎಂಬ ಹೆಸರಿನ ಪಟ್ಟಣಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಪೊಸ್ತಲಾ ಪರ್ತುನ್ ಯೆಲಿ, ಅನಿ ಅಪ್ನಿ ಕಾಯ್-ಕಾಯ್ ಕರಲ್ಲೆ ತೆನಿ ಜೆಜುಕ್ ಸಾಂಗ್ಲ್ಯಾನಿ. ಜೆಜುನ್ ತೆಂಕಾ ಅಪ್ನಾಚ್ಯಾ ವಾಂಗ್ಡಾ ಘೆಟ್ಲ್ಯಾನ್, ಅನಿ ತೆನಿ ಬೆತ್ಸಾಯಿದಾ ಮನ್ತಲ್ಯಾ ಶಾರ್ ಗಾಂವಾಕ್ ಪಾಯ್ ವಾಟೆನಿ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:10
10 ತಿಳಿವುಗಳ ಹೋಲಿಕೆ  

:ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು.


ಅಂದ್ರೆಯ ಮತ್ತು ಪೇತ್ರನಂತೆ ಫಿಲಿಪ್ಪನು ಕೂಡ ಬೆತ್ಸಾಯಿದ ಎಂಬ ಊರಿನವನು.


ಕೂಡಲೆ ಸುಗಂಧ ವೃಕ್ಷಗಳ ನಡುವೆ ಇದ್ದವನು: “ಇವರು ಲೋಕದ ವೀಕ್ಷಣಾರ್ಥವಾಗಿ ದೇವರಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು