Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:18 - ಕನ್ನಡ ಸತ್ಯವೇದವು C.L. Bible (BSI)

18 ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಒಂದಾನೊಂದು ದಿವಸ ಆತನು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಆತನು - ನನ್ನನ್ನು ಸಾಮಾನ್ಯ ಜನರು ಯಾರು ಅನ್ನುತ್ತಾರೆ ಎಂದು ಅವರನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಮ್ಮೆ ಯೇಸು ಏಕಾಂತವಾಗಿ ಪ್ರಾರ್ಥನೆ ಮಾಡುತ್ತಿದ್ದನು. ಆತನ ಶಿಷ್ಯರು ಒಟ್ಟಾಗಿ ಅಲ್ಲಿಗೆ ಬಂದರು. ಯೇಸು ಅವರಿಗೆ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಏಕಾಂತವಾಗಿ ಪ್ರಾರ್ಥಿಸುತ್ತಿದ್ದಾಗ ಅವರ ಶಿಷ್ಯರು ಅವರೊಂದಿಗೆ ಇದ್ದರು, ಆಗ ಯೇಸು ಅವರಿಗೆ, “ಜನರು ನನ್ನನ್ನು ಯಾರೆನ್ನುತ್ತಾರೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಎಕ್ ದಿಸ್ ಜೆಜು ಎಕ್ಲೊಚ್ ಮಾಗ್ನಿ ಕರ್‍ತಾನಾ ಶಿಸಾ ತೆಚೆಕ್ಡೆ ಯೆಲಿ. ತೆನಿ ಶಿಸಾಕ್ನಿ “ಲೊಕಾ ಮಿಯಾ ಕೊನ್ ಮನುನ್ ಮನ್ತ್ಯಾತ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:18
11 ತಿಳಿವುಗಳ ಹೋಲಿಕೆ  

ಒಮ್ಮೆ ಯೇಸುಸ್ವಾಮಿ ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡುತ್ತಾ ಇದ್ದರು. ಅವರ ಪ್ರಾರ್ಥನೆ ಮುಗಿದ ಮೇಲೆ ಶಿಷ್ಯರಲ್ಲಿ ಒಬ್ಬನು. “ಪ್ರಭುವೇ, ಯೊವಾನ್ನನು ತನ್ನ ಶಿಷ್ಯರಿಗೆ ಪ್ರಾರ್ಥನೆ ಮಾಡುವುದನ್ನು ಕಲಿಸಿದ ಹಾಗೆ ನಮಗೂ ಕಲಿಸಿಕೊಡಿ,” ಎಂದನು. ಅದಕ್ಕೆ ಯೇಸು ಇಂತೆಂದರು, “ನೀವು ಹೀಗೆ ಪ್ರಾರ್ಥನೆಮಾಡಬೇಕು: ತಂದೆಯೇ,


ಅನಂತರ ಯೇಸುಸ್ವಾಮಿ ಅವರೊಡನೆ ಗೆತ್ಸೆಮನೆ ಎಂಬ ತೋಪಿಗೆ ಬಂದರು. ಅಲ್ಲಿ ಶಿಷ್ಯರಿಗೆ, “ನಾನು ಅತ್ತ ಹೋಗಿ ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದರು.


ಜನರನ್ನು ಬೀಳ್ಕೊಟ್ಟ ಬಳಿಕ ಪ್ರಾರ್ಥನೆಮಾಡಲು ಯೇಸು ಒಬ್ಬರೇ ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ಅವರು ಅಲ್ಲಿ ಒಬ್ಬಂಟಿಗರಾಗಿದ್ದರು.


ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು.


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ಅದಕ್ಕೆ ಅವರು, “ಹಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ‘ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ,” ಎಂದು ಉತ್ತರವಿತ್ತರು.


ಇದನ್ನೆಲ್ಲ ಹೇಳಿ ಸುಮಾರು ಎಂಟು ದಿನಗಳಾದ ಬಳಿಕ ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆಮಾಡಲು ಬೆಟ್ಟವನ್ನು ಹತ್ತಿದರು.


ಪ್ರಾರ್ಥನೆಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು