Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:19 - ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಅವರು, “ಹಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ‘ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ,” ಎಂದು ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು - ನಿನ್ನನ್ನು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅದಕ್ಕೆ ಶಿಷ್ಯರು, “ಕೆಲವು ಜನರು ನಿನ್ನನ್ನು ‘ಸ್ನಾನಿಕನಾದ ಯೋಹಾನ’ ಎನ್ನುತ್ತಾರೆ. ಇನ್ನು ಕೆಲವರು, ‘ಎಲೀಯ’ ಎನ್ನುತ್ತಾರೆ. ಮತ್ತೆ ಕೆಲವರು, ‘ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಜೀವಂತವಾಗಿ ಎದ್ದುಬಂದಿದ್ದಾನೆ’ ಎನ್ನುತ್ತಾರೆ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ಉತ್ತರವಾಗಿ, “ಸ್ನಾನಿಕನಾದ ಯೋಹಾನನು ಎನ್ನುತ್ತಾರೆ. ಆದರೆ ಕೆಲವರು ಎಲೀಯನು. ಬೇರೆ ಕೆಲವರು ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಪುನಃ ಜೀವಂತನಾಗಿದ್ದಾನೆ ಎನ್ನುತ್ತಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಶಿಸಾನಿ ತೆಕಾ “ಅನಿ ಉಲ್ಲಿ ಲೊಕಾ ಜುವಾಂವ್ ಬಾವ್ತಿಸ್ ಮನ್ತ್ಯಾತ್,ಉಲ್ಲಿ ಲೊಕಾ ತಿಯಾ ಎಲಿಯಾ ಮನ್ತ್ಯಾತ್, ಅನಿ ಹುರಲ್ಲೆ ಅದ್ಲ್ಯಾ ಕಾಲಾತ್ಲ್ಯಾ ಪ್ರವಾದ್ಯಾನಿತ್ಲೊ ಎಕ್ಲೊ ಪ್ರವಾದಿ ಅನಿ ಪರ್‍ತುನ್ ಝಿತ್ತೊ ಹೊವ್ನ್ ಯೆಲಾ ಮನ್ತ್ಯಾತ್”, ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:19
12 ತಿಳಿವುಗಳ ಹೋಲಿಕೆ  

ಹಾಗಾದರೆ, “ನೀನು ಎಲೀಯನೋ?’ ಎಂದು ಕೇಳಲು ‘ಅಲ್ಲ’ ಎಂದನು. “ನೀನು ಬರಬೇಕಾಗಿದ್ದ ಪ್ರವಾದಿಯಿರಬಹುದೇ?’ ಎಂದು ಅವರು ಮತ್ತೆ ಕೇಳಲು, “ಅದೂ ಅಲ್ಲ” ಎಂದು ಮರುನುಡಿದನು.


ಇನ್ನು ಕೆಲವರು, ‘ಈತನೇ ಎಲೀಯನು’ ಎಂದೂ ಮತ್ತೆ ಕೆಲವರು, “ಪ್ರಾಚೀನ ಪ್ರವಾದಿಗಳಂತೆ ಈತನೂ ಒಬ್ಬ ಪ್ರವಾದಿ,” ಎಂದೂ ಹೇಳುತ್ತಿದ್ದರು.


ಅವನು ತನ್ನ ಪರಿಚಾರಕರಿಗೆ, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದ್ದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎಂದನು


“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.


ಆದ್ದರಿಂದ ಫರಿಸಾಯರು ಆ ಕುರುಡನನ್ನು ಕುರಿತು, “ಅವನೇ ನಿನಗೆ ಕಣ್ಣುಕೊಟ್ಟನೆಂದು ಹೇಳುತ್ತೀಯಲ್ಲಾ. ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ವಿಚಾರಿಸಿದರು. ಅದಕ್ಕೆ ಅವನು, “ಅವರೊಬ್ಬ ಪ್ರವಾದಿಯೇ ಸರಿ,” ಎಂದನು.


ಇದನ್ನು ಕೇಳಿ ನೆರೆದಿದ್ದವರಲ್ಲಿ ಕೆಲವರು, “ಬರಬೇಕಾಗಿದ್ದ ಪ್ರವಾದಿ ಈತನೇ ಸರಿ,” ಎಂದರು.


ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆಮಾಡಲು ಪ್ರಾರಂಭಿಸಿದನು.


ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು.


ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು.


ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪುನಃ ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ" ಎಂದು ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು