Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:35 - ಕನ್ನಡ ಸತ್ಯವೇದವು C.L. Bible (BSI)

35 ಅದರೊಳಗಿಂದ, “ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು. ಈತನ ಮಾತಿಗೆ ಕಿವಿಗೊಡಿರಿ,” ಎಂಬ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆಗ ಆ ಮೋಡದೊಳಗಿಂದ - ಈತನು ನನ್ನ ಮಗನು. ನಾನು ಆರಿಸಿಕೊಂಡವನು; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು ಇವನೇ. ಈತನಿಗೆ ವಿಧೇಯರಾಗಿರಿ” ಎಂಬ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಮೇಘದೊಳಗಿಂದ, “ಈತನು, ನಾನು ಆರಿಸಿಕೊಂಡ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂದು ಹೇಳುವ ಧ್ವನಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾಚ್ ಮೊಡಾತ್ನಾ “ಹ್ಯೊ ಮಾಜೊ ಲೆಕ್, ಮಿಯಾ ಎಚುನ್ ಕಾಡಲ್ಲೊ, ತೆಕಾ ಆಯ್ಕಾ!” ಮನ್ತಲೊ ಧನ್ ಆಯ್ಕೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:35
19 ತಿಳಿವುಗಳ ಹೋಲಿಕೆ  

ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


“ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು ಮರುಭೂಮಿಯಲಿ ದೇವರ ವಿರುದ್ಧ ದಂಗೆಯೆದ್ದವರವರು.”


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


“ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು.


ಇದಲ್ಲದೆ, “ನೀನೇ ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎನ್ನುವ ದೈವವಾಣಿ ಕೇಳಿಸಿತು.


ಆತನು ಇದನ್ನು ಹೇಳುತ್ತಿದ್ದ ಹಾಗೆ ಮೇಘವೊಂದು ಬಂದು ಅವರನ್ನಾವರಿಸಿತು. ಆ ಮೇಘದಲ್ಲಿ ಅವರು ಅದೃಶ್ಯರಾದಾಗ ಶಿಷ್ಯರು ದಿಗಿಲುಗೊಂಡರು.


‘ಪಿತನೇ, ನಿಮ್ಮ ನಾಮ ಮಹಿಮೆಯನ್ನು ಬೆಳಗಿಸಿ’ “ ಎಂದು ನುಡಿದರು. ಆಗ, “ಹೌದು, ಆ ಮಹಿಮೆಯನ್ನು ಬೆಳಗಿಸಿದ್ದೇನೆ, ಪುನಃ ಬೆಳಗಿಸುತ್ತೇನೆ,” ಎಂಬ ಸ್ವರ್ಗೀಯ ವಾಣಿ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು