Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:44 - ಕನ್ನಡ ಸತ್ಯವೇದವು C.L. Bible (BSI)

44 “ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಯೇಸು ಮಾಡಿದ ಎಲ್ಲಾ ಕಾರ್ಯಗಳಿಗೆ ಎಲ್ಲರು ಆಶ್ಚರ್ಯಪಡುತ್ತಿರಲಾಗಿ ಆತನು ತನ್ನ ಶಿಷ್ಯರಿಗೆ - ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ; ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ಮನುಷ್ಯಕುಮಾರನನ್ನು ಕೆಲವರ ವಶಕ್ಕೆ ಒಪ್ಪಿಸಲಾಗುವುದು. ನೀವು ಇದನ್ನು ಮರೆಯಕೂಡದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 “ಮಿಯಾ ತುಮ್ಕಾ ಸಾಂಗ್ತಲೆ ಯಾದ್ ಥವ್ನ್ ಘೆವಾ, ಮಾನ್ಸಾಚ್ಯಾ ಲೆಕಾಕ್ ಮಾನ್ಸಾಂಚ್ಯಾ ಅದಿಕಾರಾತ್ ದಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:44
26 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ಮರಿಯಳಾದರೋ ಈ ವಿಷಯಗಳನ್ನೆಲ್ಲಾ ಮನಸ್ಸಿನಲ್ಲಿಯೇ ಇಟ್ಟುಕೊಂಡು ಆಲೋಚಿಸುತ್ತಾ ಬಂದಳು.


ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು.


ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ನರಪುತ್ರನ ವಿಷಯವಾಗಿ ಪ್ರವಾದಿಗಳು ಬರೆದಿರುವುದೆಲ್ಲವೂ ನೆರವೇರುವುದು.


ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ‘ಈ ಮಗು ಮುಂದೆ ಎಂಥವನಾಗುವನೋ!’ ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು.


ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದರು. “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊಂದ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಯೇಸು ಅವರಿಗೆ ತಿಳಿಸಿದರು.


ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚುಮರೆಯಿಲ್ಲದೆ ಬೋಧಿಸಲಾರಂಭಿಸಿದರು.


“ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.


ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.


ಆಗ ಯೇಸು ಸ್ವಾಮಿ, “ಈಗ ನೀವು ವಿಶ್ವಾಸಿಸುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು