Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:7 - ಕನ್ನಡ ಸತ್ಯವೇದವು C.L. Bible (BSI)

7 ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಇಸ್ರಾಯೇಲ್ಯರು ಅಭಿವೃದ್ಧಿಯಾಗಿ ಅತ್ಯಧಿಕವಾಗಿ ಹೆಚ್ಚಿ ಬಹಳ ಬಲಗೊಂಡರು; ಆ ದೇಶದಲ್ಲೆಲ್ಲಾ ತುಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:7
29 ತಿಳಿವುಗಳ ಹೋಲಿಕೆ  

ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು;


ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ಇಸ್ರಯೇಲರು ಈಜಿಪ್ಟ್ ದೇಶಕ್ಕೆ ಸೇರಿದ ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡಿದರು. ಅಲ್ಲಿ ಅವರು ಆಸ್ತಿಪಾಸ್ತಿಯನ್ನು ಸಂಪಾದಿಸಿಕೊಂಡು ಬಹು ಸಂತಾನವುಳ್ಳವರಾಗಿ ಅಭಿವೃದ್ಧಿಯಾದರು.


ಇದಲ್ಲದೆ ಅವನಿಗೆ ದೇವರು, “ನಾನೇ ಸರ್ವವಲ್ಲಭನಾದ ದೇವರು; ನೀನು ವೃದ್ಧಿಯಾಗಿ ಬಹುಸಂತಾನವುಳ್ಳವನಾಗು. ನಿನ್ನಿಂದ ರಾಷ್ಟ್ರವೊಂದು ಉಂಟಾಗುವುದು, ಅನೇಕ ರಾಷ್ಟ್ರಗಳೂ ರಾಜರುಗಳೂ ನಿನ್ನಿಂದ ಹುಟ್ಟುವರು.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಹೀಗೆಂದರು - “ನೀವು ಅಭಿವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯಿರಿ’; ಭೂಲೋಕದಲ್ಲೆಲ್ಲ ಹರಡಿಕೊಳ್ಳಿ.


ಹೆಚ್ಚಿಸಿದಿರಿ ಅವರ ಮಕ್ಕಳನು ಆಗಸದ ನಕ್ಷತ್ರಗಳಷ್ಟೆ; ಬರಮಾಡಿದಿರಿ ಆ ಮಕ್ಕಳನು ವಾಗ್ದತ್ತ ನಾಡಿಗೆ ‘ಅದ ಸೇರಿ, ವಶಮಾಡಿಕೊಳ್ಳಿ’ ಎಂದು ಹೇಳಿದಿರಾ ಪಿತೃಗಳಿಗೆ.


ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ.


‘ನಾನು ನಿನ್ನನ್ನು ಫಲಪ್ರದನನ್ನಾಗಿ ಮಾಡಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನರಿಗೆ ನಿನ್ನನ್ನು ಮೂಲಪುರುಷನನ್ನಾಗಿ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ನಾಡನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು,’ ಎಂದು ಹೇಳಿದರು.


ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”


ತನ್ನ ಜನರ ಸಂತಾನವನು ಪ್ರಭು ಅಭಿವೃದ್ಧಿಗೊಳಿಸಿದ I ಶತ್ರುಗಳಿಗಿಂತಲೂ ಅವರನು ಬಲಿಷ್ಠರನ್ನಾಗಿಸಿದ II


ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.


ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.


ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.


ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.


ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.


ಅವನು ಅಲ್ಲಿಂದ ಮುಂದಕ್ಕೆ ತೆರಳಿ ಮತ್ತೊಂದು ಬಾವಿಯನ್ನು ಅಗೆಸಿದನು. ಅದರ ಬಗ್ಗೆ ಯಾರೂ ಜಗಳಕ್ಕೆ ಬರಲಿಲ್ಲ. ಈ ಕಾರಣ ಅವನು, “ಸರ್ವೇಶ್ವರ ನಮಗೀಗ ಸ್ಥಳಾವಕಾಶ ಮಾಡಿಕೊಟ್ಟಿದ್ದಾರೆ; ನಾವು ಅಭಿವೃದ್ಧಿಯಾಗುತ್ತೇವೆ,” ಎಂದು ಹೇಳಿ ಆ ಬಾವಿಗೆ ‘ರೆಹೋಬೋತ್’ ಎಂದು ಹೆಸರಿಟ್ಟನು.


ಈಜಿಪ್ಟರು ಅವರಿಗೆ ಎಷ್ಟು ಕಿರುಕುಳ ಕೊಡುತ್ತಿದ್ದರೋ ಅಷ್ಟೂ ಹೆಚ್ಚಿ ಹರಡಿಕೊಳ್ಳುತ್ತಿದ್ದರು.


ಇದೂ ಅಲ್ಲದೆ ಆ ಫರೋಹನು, “ನೋಡಿ, ನಾಡಿನಲ್ಲಿ ಈ ಜನರ ಸಂಖ್ಯೆ ಹೆಚ್ಚಾಗಿಬಿಟ್ಟಿದೆ! ಇವರು ತಮ್ಮ ಕೆಲಸದಿಂದ ತಪ್ಪಿಸಿಕೊಳ್ಳುವುದಕ್ಕೆ ನೀವೇ ಕಾರಣ ಆಗುತ್ತಿದ್ದೀರಿ,” ಎಂದನು.


ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


ಭೂಮಿಯಲ್ಲಿ ಮೊಳಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಿದೆ; ನೀನು ಬಲಿತು ಪ್ರಾಯ ತುಂಬಿ ಅತಿ ಸುಂದರಿಯಾದೆ; ನಿನಗೆ ಸ್ತನಗಳು ಮೂಡಿದವು. ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು