Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:17 - ಕನ್ನಡ ಸತ್ಯವೇದವು C.L. Bible (BSI)

17 ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೂ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷವಿುಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇದೊಂದು ಸಲ ನನ್ನ ಪಾಪಗಳನ್ನು ಕ್ಷಮಿಸಿ ಈ ‘ವಿಪತ್ತನ್ನು’ ನನ್ನಿಂದ ತೊಲಗಿಸಬೇಕೆಂದು ಯೆಹೋವನಿಗೆ ಪ್ರಾರ್ಥಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗಿರುವುದರಿಂದ ಈಗ ಒಂದೇ ಸಾರಿ ಮಾತ್ರ ನನ್ನ ಪಾಪವನ್ನು ಕ್ಷಮಿಸಬೇಕು. ಈ ಮರಣಕರವಾದ ಉಪದ್ರವವನ್ನು ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:17
13 ತಿಳಿವುಗಳ ಹೋಲಿಕೆ  

ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.


ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲು ಮಳೆ ಇನ್ನು ಸಾಕೇ ಸಾಕು. ಇವುಗಳನ್ನು ನಿಲ್ಲಿಸುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ನಿಮಗೆ ಅಪ್ಪಣೆಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ,” ಎಂದು ಹೇಳಿದನು.


ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.


ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ಆಗ ಸಿಮೋನನು, “ನೀವು ಹೇಳಿದ ಯಾವ ಕೇಡೂ ನನಗೆ ತಗಲದಂತೆ ನನಗಾಗಿ ನೀವೇ ಪ್ರಭುವಿನಲ್ಲಿ ಪ್ರಾರ್ಥನೆಮಾಡಿ,” ಎಂದು ಬೇಡಿಕೊಂಡನು.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು; ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೈವಪುರುಷನೇ, ಪಾತ್ರೆಯಲ್ಲಿ ವಿಷ!” ಎಂದು ಕೂಗಿದರು.


ದಯವಿಟ್ಟು ನನ್ನ ಪಾಪವನ್ನು ಕ್ಷಮಿಸಿ; ನಾನು ಸರ್ವೇಶ್ವರನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಅವನನ್ನು ಬೇಡಿಕೊಂಡನು.


ಅದಕ್ಕೆ ಫರೋಹನು, “ಒಳ್ಳೆಯದು, ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನಿಮಗೆ ಅಪ್ಪಣೆಕೊಡುತ್ತೇನೆ. ಆದರೆ ದೂರ ಹೋಗಕೂಡದು. ನನಗಾಗಿ ಪ್ರಾರ್ಥನೆ ಮಾಡಬೇಕು,” ಎಂದನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಸರ್ವೇಶ್ವರನು ಸತ್ಯವಂತನು; ನಾನೂ ನನ್ನ ಜನರೂ ತಪ್ಪಿತಸ್ಥರು.


ನಿನ್ನ ಮೇಲೆ, ನಿನ್ನ ಪ್ರಜೆಗಳ ಮೇಲೆ ಹಾಗೂ ಪರಿವಾರದವರ ಮೇಲೆ ಆ ಕಪ್ಪೆಗಳು ಏರಿ ಬರುವುವು'.”


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು