Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:24 - ಕನ್ನಡ ಸತ್ಯವೇದವು C.L. Bible (BSI)

24 ಫರೋಹನು ಮೋಶೆಯನ್ನು ಕರೆಯಿಸಿ, “ನೀವು ಹೋಗಿ ಸರ್ವೇಶ್ವರನಿಗೆ ಆರಾಧನೆ ಮಾಡಿಬರಬಹುದು; ನಿಮ್ಮ ಮಡದಿ ಮಕ್ಕಳೂ ಹೋಗಿಬರಬಹುದು; ನಿಮ್ಮ ದನಕುರಿಗಳನ್ನು ಮಾತ್ರ ಇಲ್ಲೇ ಬಿಟ್ಟು ಹೋಗಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಫರೋಹನು ಮೋಶೆಯನ್ನು ಕರೆಯಿಸಿ ಅವನಿಗೆ, “ನೀವು ಹೋಗಿ ಯೆಹೋವನಿಗೆ ಆರಾಧನೆ ಮಾಡಿ ಬರಬಹುದು. ನಿಮ್ಮ ಮನೆಗಳಿಗೆ ಸೇರಿದವರೂ ಹೋಗಬಹುದು. ನಿಮ್ಮ ಕುರಿದನಗಳನ್ನು ಮಾತ್ರ ಇಲ್ಲೇ ಬಿಟ್ಟುಹೋಗಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಫರೋಹನು ಮೋಶೆಯನ್ನು ಕರಸಿ - ನೀವು ಹೋಗಿ ಯೆಹೋವನಿಗೆ ಆರಾಧನೆ ಮಾಡಿ ಬರಬಹುದು; ನಿಮ್ಮ ಮನೆಗಳಿಗೆ ಸೇರಿದವರೂ ಹೋಗಬಹುದು; ನಿಮ್ಮ ಕುರಿದನಗಳನ್ನು ಮಾತ್ರ ಇಲ್ಲೇ ಬಿಟ್ಟುಹೋಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಫರೋಹನು ಮತ್ತೆ ಮೋಶೆಯನ್ನು ಕರೆಸಿ, “ಹೋಗಿ, ಯೆಹೋವನನ್ನು ಆರಾಧಿಸಿರಿ! ನೀವು ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಬಹುದು. ಆದರೆ ನೀವು ನಿಮ್ಮ ಕುರಿಗಳನ್ನು ದನಕರುಗಳನ್ನು ಇಲ್ಲಿಯೇ ಬಿಟ್ಟುಹೋಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಫರೋಹನು ಮೋಶೆಯನ್ನು ಕರೆಯಿಸಿ ಅವನಿಗೆ, “ನೀವು ಹೋಗಿ ಯೆಹೋವ ದೇವರಿಗೆ ಆರಾಧನೆ ಮಾಡಿರಿ. ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಡದಿ ಮಕ್ಕಳೂ ನಿಮ್ಮ ಸಂಗಡ ಹೋಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:24
7 ತಿಳಿವುಗಳ ಹೋಲಿಕೆ  

ಅದಕ್ಕೆ ಫರೋಹನು, “ಒಳ್ಳೆಯದು, ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನಿಮಗೆ ಅಪ್ಪಣೆಕೊಡುತ್ತೇನೆ. ಆದರೆ ದೂರ ಹೋಗಕೂಡದು. ನನಗಾಗಿ ಪ್ರಾರ್ಥನೆ ಮಾಡಬೇಕು,” ಎಂದನು.


ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲು ಮಳೆ ಇನ್ನು ಸಾಕೇ ಸಾಕು. ಇವುಗಳನ್ನು ನಿಲ್ಲಿಸುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ನಿಮಗೆ ಅಪ್ಪಣೆಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ,” ಎಂದು ಹೇಳಿದನು.


ಅವರ ಕುರಿದನಗಳೂ ಆಸ್ತಿಪಾಸ್ತಿಯೂ ಪಶುಪ್ರಾಣಿಗಳೂ ನಮ್ಮವುಗಳೇ ಆಗುತ್ತವಲ್ಲವೆ? ಆದ್ದರಿಂದ ಅವರು ನಮ್ಮಲ್ಲಿ ವಾಸಮಾಡುವಂತೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ".


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಸಿ, “ನೀವು ಹೋಗಿ ಈ ದೇಶದಲ್ಲೇ ನಿಮ್ಮ ದೇವರಿಗೆ ಬಲಿಯನ್ನೊಪ್ಪಿಸಬಹುದು,” ಎಂದನು.


ಅದಕ್ಕೆ ಮೋಶೆ, “ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ನಾವು ಸಮರ್ಪಿಸಬೇಕಾದ ಬಲಿಗಳಿಗೂ ದಹನಬಲಿಗಳಿಗೂ ಬೇಕಾದ ಪ್ರಾಣಿಗಳನ್ನು ತೆಗೆದುಕೊಂಡು ಹೋಗುವುದನ್ನು ನಮಗೆ ಬಿಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು