Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:26 - ಕನ್ನಡ ಸತ್ಯವೇದವು C.L. Bible (BSI)

26 ಅದು ಮಾತ್ರವಲ್ಲ, ನಮ್ಮ ಎಲ್ಲ ಪಶುಪ್ರಾಣಿಗಳನ್ನೂತೆಗೆದುಕೊಂಡು ಹೋಗಲು ಅಪ್ಪಣೆ ಕೊಡಿ. ಒಂದು ಗೊರಸನ್ನೂ ನಾವು ಬಿಟ್ಟುಹೋಗಲು ಆಗದು. ಈ ಪಶುಪ್ರಾಣಿಗಳಿಂದಲೇ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಬಲಿಯೊಪ್ಪಿಸಬೇಕಾಗಿದೆ ಅಲ್ಲವೆ? ಯಾವ ಯಾವ ಪ್ರಾಣಿಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವುದಕ್ಕೆ ಮುಂಚೆ ನಮಗೆ ತಿಳಿಯದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಮ್ಮ ಎಲ್ಲಾ ಪಶುಗಳನ್ನೂ ಸಹ ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನಾದರೂ ನಾವು ಬಿಟ್ಟು ಹೋಗುವುದಿಲ್ಲ. ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಆರಾಧನೆಯನ್ನು ಸಲ್ಲಿಸಬೇಕು. ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ನಾವು ಅಲ್ಲಿಗೆ ಸೇರುವುದಕ್ಕೆ ಮೊದಲು ನಮಗೆ ತಿಳಿಯದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಒಂದು ಗೊರಸೆಯನ್ನಾದರೂ ನಾವು ಬಿಟ್ಟು ಹೋಗುವದಕ್ಕಾಗದು; ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಯಜ್ಞ ಮಾಡಬೇಕಲ್ಲವೇ; ಯಾವ ಪಶುಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವದಕ್ಕೆ ಮುಂಚೆ ನಮಗೆ ತಿಳಿಯದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಮ್ಮ ಪ್ರಾಣಿಗಳನ್ನೆಲ್ಲಾ ತೆಗೆದುಕೊಂಡು ಹೋಗುವೆವು. ಒಂದನ್ನಾದರೂ ಬಿಟ್ಟುಹೋಗುವುದಿಲ್ಲ; ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ಅಲ್ಲಿಗೆ ಹೋದಾಗಲೇ ನಮಗೆ ತಿಳಿಯುವುದು. ಆದ್ದರಿಂದ, ನಾವು ಇವುಗಳನ್ನೆಲ್ಲಾ ನಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಮ್ಮ ಪಶುಪ್ರಾಣಿಗಳನ್ನೂ ನಾವು ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನೂ ಬಿಡಲಾರೆವು. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವುದಕ್ಕೆ ಅವುಗಳಿಂದಲೇ ಬಲಿ ಅರ್ಪಿಸಬೇಕು. ಯೆಹೋವ ದೇವರಿಗೆ ಯಾವ ಅರ್ಪಣೆ ಮಾಡಬೇಕೆಂಬುದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:26
12 ತಿಳಿವುಗಳ ಹೋಲಿಕೆ  

ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.


ಆ ದಿನ ಬಂದಾಗ ‘ಸರ್ವೇಶ್ವರಸ್ವಾಮಿಗೆ ಸಮರ್ಪಿತ’ ಎಂಬ ಲಿಪಿಯು ಕುದುರೆಗಳ ಕತ್ತಿಗೆ ಕಟ್ಟಿರುವ ಗಂಟೆಗಳ ಮೇಲೆ ಕೆತ್ತನೆ ಮಾಡಲಾಗಿರುವುದು. ದೇವಾಲಯದ ಪಾತ್ರೆಗಳೆಲ್ಲವು ಬಲಿಪೀಠದ ಪಾತ್ರೆಗಳಷ್ಟೆ ಪವಿತ್ರವಾಗಿರುವುವು.


ಅವರು ತಮ್ಮ ದನಕುರಿಗಳೊಂದಿಗೆ ಸರ್ವೇಶ್ವರಸ್ವಾಮಿಯನ್ನು ಅರಸಿಹೋದರೂ, ಅವರನ್ನು ಕಾಣರು. ಸರ್ವೇಶ್ವರ ಅವರಿಂದ ಮರೆಯಾಗಿದ್ದಾರೆ.


ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.


ನಿನ್ನ ಆಸ್ತಿಯನ್ನರ್ಪಿಸಿ ಸರ್ವೇಶ್ವರನನ್ನು ಸನ್ಮಾನಿಸು, ನಿನ್ನ ಬೆಳೆಯ ಪ್ರಥಮ ಫಲವನ್ನು ಕಾಣಿಕೆಯಾಗಿಕೊಡು.


ನೀವು ಕೇಳಿಕೊಂಡಂತೆ ಸರ್ವೇಶ್ವರನನ್ನು ಆರಾಧಿಸಿ. ನಿಮ್ಮ ಕೋರಿಕೆಯಂತೆ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು. ನನ್ನ ಹಿತಕ್ಕಾಗಿಯೂ ಪ್ರಾರ್ಥನೆಮಾಡಿ,” ಎಂದನು.


ಅದಕ್ಕೆ ಮೋಶೆ, “ನಾವು ಸರ್ವೇಶ್ವರ ಸ್ವಾಮಿಗಾಗಿ ಹಬ್ಬವನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು, ಮುದುಕರು ಎಲ್ಲರು ಹೋಗುತ್ತೇವೆ; ಗಂಡುಹೆಣ್ಣು ಮಕ್ಕಳನ್ನೂ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ,” ಎಂದು ಉತ್ತರಕೊಟ್ಟನು.


ಅದಕ್ಕೆ ಮೋಶೆ, “ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ನಾವು ಸಮರ್ಪಿಸಬೇಕಾದ ಬಲಿಗಳಿಗೂ ದಹನಬಲಿಗಳಿಗೂ ಬೇಕಾದ ಪ್ರಾಣಿಗಳನ್ನು ತೆಗೆದುಕೊಂಡು ಹೋಗುವುದನ್ನು ನಮಗೆ ಬಿಡಿ.


ನಾವು ಮರುಭೂಮಿಯಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸುವ ಪ್ರಕಾರ ಬಲಿಯೊಪ್ಪಿಸಬೇಕಾಗಿದೆ’." ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು