Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:5 - ಕನ್ನಡ ಸತ್ಯವೇದವು C.L. Bible (BSI)

5 ನೆಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವುವು; ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲ ಮರಗಳ ಎಲೆಚಿಗುರುಗಳನ್ನು ತಿಂದುಬಿಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವವು. ನೆಲವೇ ಕಾಣಿಸದೆ ಹೋಗುವುದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆ ಚಿಗುರುಗಳನ್ನೂ ತಿಂದುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವು ಭೂವಿುಯನ್ನೆಲ್ಲಾ ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದದ್ದೆಲ್ಲವನ್ನು ವಿುಡಿತೆಗಳು ತಿಂದುಬಿಡುವವು; ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆಚಿಗುರುಗಳನ್ನೂ ತಿಂದು ಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮಿಡತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಮಿಡತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಒಬ್ಬನು ಭೂಮಿಯನ್ನು ಕಾಣುವುದಕ್ಕಾಗದಷ್ಟು ಅವು ಭೂಮಿಯನ್ನೆಲ್ಲಾ ಮುಚ್ಚಿಕೊಳ್ಳುವುವು. ಇದಲ್ಲದೆ ಅವು ಆಲಿಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವುದೆಲ್ಲವನ್ನೂ, ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:5
7 ತಿಳಿವುಗಳ ಹೋಲಿಕೆ  

ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದುಬಿಟ್ಟಿದ್ದನ್ನು ಕುದುರೆಮಿಡತೆ ತಿಂದುಬಿಟ್ಟಿತು; ಕುದುರೆಮಿಡತೆ ಬಿಟ್ಟದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.


ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ನಷ್ಟವಾಗಲಿಲ್ಲ.


ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು.


ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರಮಾಡುವೆನು.


ಸರ್ವೇಶ್ವರ ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ಕೈಚಾಚಿ ಮಿಡಿತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ,” ಎಂದು ಹೇಳಿದರು.


ನೆಲವೆಲ್ಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಂಡವು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಪಚ್ಚೆ ಪೈರುಗಳನ್ನೂ ಗಿಡಮರ ಕಾಯಿಗಳನ್ನೂ ತಿಂದುಬಿಟ್ಟವು. ಈಜಿಪ್ಟ್ ದೇಶದಲ್ಲೆಲ್ಲಾ ಹಸುರಾದ ಗಿಡಮರಗಳೊಂದೂ ಉಳಿಯಲಿಲ್ಲ.


ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು