Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಫರೋಹನ ಪರಿವಾರದವರು ಅವನಿಗೆ - ಈ ಮನುಷ್ಯನು ಇನ್ನು ಎಷ್ಟು ದಿವಸ ನಮಗೆ ಉರುಲಾಗಿರಬೇಕು? ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವದಕ್ಕೆ ಅಪ್ಪಣೆಕೊಡು. ಐಗುಪ್ತದೇಶವು ಹಾಳಾಯಿತೆಂದು ಇನ್ನೂ ನಿನ್ನ ಮನಸ್ಸಿಗೆ ಬರಲಿಲ್ಲವೋ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಫರೋಹನ ಅಧಿಕಾರಿಗಳು ಅವನಿಗೆ, “ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವಂತೆ ಅವರನ್ನು ಕಳುಹಿಸಿಬಿಡು. ಈಜಿಪ್ಟ್ ನಾಶವಾಯಿತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:7
16 ತಿಳಿವುಗಳ ಹೋಲಿಕೆ  

“ಇವಳನ್ನು ಅವನಿಗೆ ಕೊಡುತ್ತೇನೆ. ಈಕೆ ಅವನಿಗೆ ಉರುಲಾಗಿರಬಲ್ಲಳು; ಫಿಲಿಷ್ಟಿಯರ ಕೈಗೆ ಇವನು ಸಿಕ್ಕಿಬೀಳುವಂತೆ ಮಾಡಬಲ್ಲಳು,” ಎಂದುಕೊಂಡನು. ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೇ ಸಂದರ್ಭ ಬಂದೊದಗಿದೆ,” ಎಂದು ಹೇಳಿದನು.


ಸಾವಿಗಿಂತ ಹೆಚ್ಚು ವಿಷಕರವಾದ ವಿಷಯವೊಂದು ನನಗೆ ಕಂಡುಬಂದಿತು. ಅದು ಯಾವುದೆಂದರೆ - ಕೆಟ್ಟ ಹೆಂಗಸು. ಅವಳು ತೋರಿಸುವ ಪ್ರೀತಿ ಒಂದು ಬೋನು, ಸಿಕ್ಕಿಸಿಕೊಳ್ಳುವ ಒಂದು ಬಲೆ; ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯಾದರೋ ಅವಳ ಕೈಗೆ ಸಿಕ್ಕಿಬೀಳುವನು.


ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.


ಅವರು ನಿಮ್ಮ ನಾಡಿನಲ್ಲಿ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯೆ ನಿಮಗೆ ಉರುಲಾಗುವುದು.


ನಿಮ್ಮನ್ನು ಬಂಧಿಸಲು ಅಲ್ಲ, ಬೆಂಬಲಿಸಲು ಇದನ್ನು ಹೇಳುತ್ತಿದ್ದೇನೆ. ನೀವು ಸಜ್ಜನರಾಗಿ ನಡೆದುಕೊಂಡು, ಭಿನ್ನಭಾವವಿಲ್ಲದೆ ಪ್ರಭುವಿನ ಪಾದಸೇವೆ ಮಾಡಬೇಕೆಂಬುದೇ ನನ್ನ ಆಶೆ.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಬಾಬಿಲೋನ್ ತಟ್ಟನೆ ಬಿದ್ದು ಹಾಳಾಯಿತು. ಅದಕ್ಕಾಗಿ ಗೋಳಾಡಿ. ಅದರ ನೋವನ್ನು ನೀಗಿಸಲು ಔಷಧವನ್ನು ತನ್ನಿ. ಒಂದು ವೇಳೆ ಅದು ಗುಣವಾದೀತು!


“ಮೋವಾಬ್ ನಾಶವಾಯಿತು. ಅಲ್ಲಿ ದಿಕ್ಕೆಟ್ಟವರು ಮೊರೆಯಿಟ್ಟಿರುವರು.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಸ್ವಂತ ಜನರನೇ ಕೊಂದ ನಿನಗೆ ಸ್ವಂತ ನಾಡನೇ ನಾಶಗೈದ ನಿನಗೆ ಸಿಗದು ರಾಜ್ಯವೈಭವದ ಸಂಸ್ಕಾರ ಗೋರಿಗೆ, ‘ಹೇಳಹೆಸರಿಲ್ಲದ ಗತಿ ದುರುಳರ ಸಂತಾನಕೆ’.


ಕೆಟ್ಟವನು ತನ್ನ ಪಾಪಪಾಶದಲ್ಲೆ ಸಿಕ್ಕಿಬೀಳುವನು; ಒಳ್ಳೆಯವನು ಉಲ್ಲಾಸದಿಂದ ಹಾಡಿ ಹರ್ಷಿಸುವನು.


ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ಈಜಿಪ್ಟಿನವರು, “ನಾವೆಲ್ಲರು ಸಾಯುತ್ತೇವೆ,” ಎಂದುಕೊಂಡು ತಮ್ಮ ದೇಶವನ್ನು ಬಿಟ್ಟು ಬೇಗನೆ ಹೋಗಬೇಕೆಂದು ಇಸ್ರಯೇಲರನ್ನು ಒತ್ತಾಯಪಡಿಸಿದರು.


ದೇವರ ಹಸ್ತ ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿ,” ಎಂದು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು