Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:14 - ಕನ್ನಡ ಸತ್ಯವೇದವು C.L. Bible (BSI)

14 ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು. ಅದರಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಮಾಡಬೇಕು. ಅದನ್ನು ಶಾಶ್ವತನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:14
29 ತಿಳಿವುಗಳ ಹೋಲಿಕೆ  

ಅನಂತರ ಅರಸನು ಜನರೆಲ್ಲರಿಗೆ, ನಿಬಂಧನ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೋಸ್ಕರ ಪಾಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು.


ನೀವು ಮತ್ತು ನಿಮ್ಮ ಸಂತತಿಯವರು ಈ ನಿಯಮಗಳನ್ನು ಶಾಶ್ವತವಾಗಿ ಆಚರಿಸಬೇಕು.


ಹುಳಿರಹಿತ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ನೀವು ಆಚರಿಸಬೇಕು. ಏಕೆಂದರೆ ಆ ದಿನದಲ್ಲೇ ನಾನು ನಿಮ್ಮ ಪಾಳೆಯದವರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದದ್ದು . ನೀವೂ ನಿಮ್ಮ ಸಂತತಿಯವರೂ ಆ ದಿನವನ್ನು ಆಚರಣೆಗೆ ತರಬೇಕು.


ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು: “ಪಾಸ್ಕಹಬ್ಬ ಆಚರಣೆಯ ಕ್ರಮ ಇದು - ವಿದೇಶೀಯನಾರೂ ಆ ಭೋಜನದಲ್ಲಿ ಪಾಲ್ಗೊಳ್ಳಬಾರದು.


ಜಗತ್ತಿನಾದ್ಯಂತ, ಎಲ್ಲೆಲ್ಲಿ ಶುಭಸಂದೇಶ ಪ್ರಕಟವಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು. ಇದು ನಿಶ್ಚಯ,” ಎಂದರು.


ನಿನ್ನ ನಾಮ ಪ್ರಭು ಶಾಶ್ವತ I ನಿನ್ನ ಸ್ಮರಣೆಯೂ ಅನವರತ II


ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


“ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.


ಬಳಿಕ ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ನನ್ನ ಸ್ಮರಣೆಗಾಗಿ ಇದನ್ನು ಮಾಡಿರಿ,” ಎಂದರು.


ಅವರ ಕಿರೀಟವು ಹೇಲಮ್, ತೊಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ - ಇವರ ಜ್ಞಾಪಕಾರ್ಥವಾಗಿ ಆಲಯದಲ್ಲೇ ಇರುವುದು.”


ಅದರೊಂದಿಗೆ ಪ್ರತಿದಿನ ಬೆಳಿಗ್ಗೆ ಧಾನ್ಯನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ ಅದನ್ನು ನೆನೆಯಿಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು; ಇವುಗಳನ್ನು ಪ್ರತಿನಿತ್ಯವೂ ಸರ್ವೇಶ್ವರನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು; ಇದು ಶಾಶ್ವತ ನಿಯಮ.


ದಾವೀದನು ಇಸ್ರಯೇಲರಲ್ಲಿ ಇದನ್ನು ಒಂದು ಕಟ್ಟಳೆಯನ್ನಾಗಿ ಅಂದು ವಿಧಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.


‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಜೋರ್ಡನನ್ನು ದಾಟುವಾಗ ಅದರ ಮುಂದೆ ಜೋರ್ಡನಿನ ನೀರು ನಿಂತುಹೋಯಿತು,’ ಎಂದು ಹೇಳಿರಿ. ಅದರ ನೀರು ನಿಂತುಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಯೇಲರಿಗೆ ಚಿರಸ್ಮಾರಕಗಳಾಗಿರುವುವು,” ಎಂದು ಹೇಳಿದನು.


ಸರ್ವೇಶ್ವರ ಆರೋನನಿಗೆ ಹೀಗೆಂದು ಆಜ್ಞಾಪಿಸಿದರು: “ಇಸ್ರಯೇಲರು ನನಗಾಗಿ ಮೀಸಲಾಗಿಟ್ಟು ಸಮರ್ಪಿಸುವ ಪದಾರ್ಥಗಳನ್ನೆಲ್ಲ ಅಂದರೆ ಪ್ರತಿಷ್ಠಾಪಿತವಾದ ವಸ್ತುಗಳನ್ನೆಲ್ಲಾ ನಿನಗೂ ನಿನ್ನ ಸಂತತಿಯವರಿಗೂ ದಾನಮಾಡಿದ್ದೇನೆ. ಅವು ಸದಾಕಾಲ ನಿಮಗೆ ಸಲ್ಲಬೇಕಾದ ಪಾಲು.


ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.


ಆರೋನನ ವಂಶಸ್ಥರಾದ ಯಾಜಕರೇ ಆ ಕಹಳೆಗಳನ್ನು ಊದಬೇಕು. “ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿರಲಿ.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೆವೇಳೆಯಲ್ಲಿ ಇಸ್ರಯೇಲ್ ಸಮಾಜದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.


ಹುಳಿಯಿಲ್ಲದ ರೊಟ್ಟಿ ತಿನ್ನುವ ಹಬ್ಬ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರಮಾಸದ ನಿಗದಿಯಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಏಕೆಂದರೆ ಆ ಮಾಸದಲ್ಲೇ ನೀವು ಈಜಿಪ್ಟಿನಿಂದ ಹೊರಟುಬಂದದ್ದು. ನನ್ನ ಸನ್ನಿಧಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯಿಲ್ಲದೆ ಬರೀ ಕೈಯಲ್ಲಿ ಬರಕೂಡದು.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಅಂದು ಮೊದಲ್ಗೊಂಡು ಏಳು ದಿನಗಳಲ್ಲೂ ಹುಳಿರಹಿತ ರೊಟ್ಟಿಯನ್ನು ಊಟಮಾಡಬೇಕು.


ಜ್ಞಾಪಕಾರ್ಥವಾಗಿ ಅವುಗಳನ್ನು ನಿನ್ನ ಕೈಗೆ ಕಟ್ಟಿಕೊ; ಜ್ಞಾಪಕ ಪಟ್ಟಿಯಂತೆ ಹಣೆಗೆ ತೊಟ್ಟುಕೊ.


ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.


ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶೀಯರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ. ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ಹೇಗೆ ಇರುವಿರೋ ಹಾಗೆಯೇ ಅನ್ಯದೇಶೀಯನೂ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು