Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:21 - ಕನ್ನಡ ಸತ್ಯವೇದವು C.L. Bible (BSI)

21 ಮೋಶೆ ಇಸ್ರಯೇಲರ ಹಿರಿಯರೆಲ್ಲರನ್ನು ಕರೆಯಿಸಿ ಅವರಿಗೆ, “ನೀವು ನಿಮ್ಮ ನಿಮ್ಮ ಕುಟುಂಬಗಳಿಗಾಗಿ ಹಿಂಡಿನಿಂದ ಮರಿಗಳನ್ನು ಆರಿಸಿಕೊಂಡು ಪಾಸ್ಕ ಹಬ್ಬಕ್ಕೆ ಕೊಯ್ಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಮೋಶೆಯು ಇಸ್ರಾಯೇಲರ ಹಿರಿಯರೆಲ್ಲರನ್ನೂ ಕರೆಯಿಸಿ ಅವರಿಗೆ, “ನೀವು, ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಮಂದೆಯಿಂದ ಮರಿಗಳನ್ನು ಆರಿಸಿಕೊಂಡು ಪಸ್ಕಹಬ್ಬಕ್ಕೆ ಕೊಯ್ಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಮೋಶೆಯು ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡ ಕರಸಿ ಅವರಿಗೆ - ನೀವು ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಹಿಂಡಿನಿಂದ ಮರಿಗಳನ್ನು ತೆಗೆದುಕೊಂಡು ಪಸ್ಕ ಹಬ್ಬಕ್ಕೆ ಕೊಯ್ಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಮೋಶೆಯು ಹಿರಿಯರ ಸಭೆ ಸೇರಿಸಿ, “ನಿಮ್ಮ ಕುಟುಂಬಗಳಿಗೆ ಬೇಕಾದ ಪಶುಗಳನ್ನು ತೆಗೆದುಕೊಂಡು ಪಸ್ಕಕ್ಕಾಗಿ ಅವುಗಳನ್ನು ಕೊಯ್ಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯರನ್ನು ಕರೆದು ಅವರಿಗೆ, “ನಿಮ್ಮ ಕುಟುಂಬಗಳ ಪ್ರಕಾರ ಕುರಿಗಳನ್ನು ಆಯ್ದುಕೊಂಡು ಪಸ್ಕಹಬ್ಬಕ್ಕಾಗಿ ಕೊಯ್ಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:21
18 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆಯಿಡಬೇಕು: ‘ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ಆರಿಸಿಕೊಳ್ಳಬೇಕು.


ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದ ನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.


ಅನಂತರ ಅರಸನು ಜನರೆಲ್ಲರಿಗೆ, ನಿಬಂಧನ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೋಸ್ಕರ ಪಾಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು.


ಇಸ್ರಯೇಲರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಜೆರಿಕೋವಿನ ಬಯಲಿನಲ್ಲಿ ಪಾಸ್ಕಹಬ್ಬವನ್ನಾಚರಿಸಿದರು.


ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.


ಮೋಶೆ ಇಳಿದುಬಂದು ಜನರ ಹಿರಿಯರನ್ನು ಕೂಡಿಸಿ, ಸರ್ವೇಶ್ವರ ಆಜ್ಞಾಪಿಸಿದ್ದ ಆ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.


ಅದಕ್ಕೆ ಸರ್ವೇಶ್ವರ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಇಸ್ರಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು, ನಾನು ತೋರಿಸುವ ಸ್ಥಳಕ್ಕೆ ಜನರ ಮುಂದೆ ಹೋಗು.


ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ಬೇಗ ಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರ ಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ.


ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.


ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.


ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


ನೀವು ನಿಮ್ಮ ಎಲ್ಲಾ ಮನೆಗಳಲ್ಲಿ ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕೇ ಹೊರತು ಹುಳಿಸಹಿತವಾದ ಯಾವುದನ್ನೂ ತಿನ್ನಕೂಡದು,” ಎಂದು ವಿಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು