ವಿಮೋಚನಕಾಂಡ 12:27 - ಕನ್ನಡ ಸತ್ಯವೇದವು C.L. Bible (BSI)27 ‘ಸರ್ವೇಶ್ವರ ಸ್ವಾಮಿ ಈಜಿಪ್ಟಿನವರನ್ನು ಸಂಹರಿಸಿದಾಗ ಆ ದೇಶದಲ್ಲೇ ಇದ್ದ ಇಸ್ರಯೇಲರ ಮನೆಗಳನ್ನು ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದರು. ಆದ್ದರಿಂದ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಈ ಪಾಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ’ ಎಂದು ಉತ್ತರಕೊಡಿ,” ಎಂದು ಹೇಳಿದನು. ... ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತದೇಶದಲ್ಲಿದ್ದ ಇಸ್ರಾಯೇಲ್ಯರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದದರಿಂದ ನಾವು ಯೆಹೋವನ ಪಸ್ಕವೆಂಬ ಈ ಯಜ್ಞಾಚಾರವನ್ನು ನಡಿಸುವದುಂಟು ಎಂದು ಹೇಳಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ‘ಇದು ಯೆಹೋವನನ್ನು ಸನ್ಮಾನಿಸಲು ಮಾಡುವ ಪಸ್ಕಹಬ್ಬವಾಗಿದೆ. ಯಾಕೆಂದರೆ ನಾವು ಈಜಿಪ್ಟಿನಲ್ಲಿದ್ದಾಗ ಯೆಹೋವನು ಇಸ್ರೇಲರ ಮನೆಗಳನ್ನು ಬಿಟ್ಟು ದಾಟಿಹೋದನು; ಈಜಿಪ್ಟಿನವರನ್ನು ಸಂಹರಿಸಿದನು; ಆದರೆ ಆತನು ನಮ್ಮ ಮನೆಗಳಲ್ಲಿದ್ದವರನ್ನು ರಕ್ಷಿಸಿದನು’ ಎಂದು ಹೇಳಬೇಕು. “ಆಗ ಮೋಶೆಯ ಮಾತನ್ನು ಕೇಳುತ್ತಿದ್ದ ಇಸ್ರೇಲರು ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನೀವು ಅವರಿಗೆ, ‘ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಈಜಿಪ್ಟಿನವರನ್ನು ಸಂಹರಿಸಿ, ನಮ್ಮ ಮನೆಗಳನ್ನು ಕಾಪಾಡುವುದಕ್ಕಾಗಿ ಇಸ್ರಾಯೇಲರ ಮನೆಗಳನ್ನು ದಾಟಿಹೋದ ಯೆಹೋವ ದೇವರ ಪಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ,’ ಎಂದು ನೀವು ಹೇಳಬೇಕು,” ಎಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು. ಅಧ್ಯಾಯವನ್ನು ನೋಡಿ |