Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:43 - ಕನ್ನಡ ಸತ್ಯವೇದವು C.L. Bible (BSI)

43 ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು: “ಪಾಸ್ಕಹಬ್ಬ ಆಚರಣೆಯ ಕ್ರಮ ಇದು - ವಿದೇಶೀಯನಾರೂ ಆ ಭೋಜನದಲ್ಲಿ ಪಾಲ್ಗೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, “ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗೆಂದರೆ, ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನಂದರೆ - ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗಂದರೆ - ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಯೆಹೋವನು ಮೋಶೆ ಆರೋನರಿಗೆ, “ಪಸ್ಕಹಬ್ಬದ ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ಕಹಬ್ಬದ ಊಟವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಯೆಹೋವ ದೇವರು ಮೋಶೆ ಆರೋನರಿಗೆ, “ಪಸ್ಕದ ಶಾಸನವು ಇದೆ: “ವಿದೇಶಿಯರಲ್ಲಿ ಯಾರೂ ಪಸ್ಕಭೋಜನವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:43
9 ತಿಳಿವುಗಳ ಹೋಲಿಕೆ  

ನಿಮ್ಮ ಬಳಿ ವಾಸವಾಗಿರುವ ವಿದೇಶೀಯನೊಬ್ಬನು ಸರ್ವೇಶ್ವರನಿಗೆ ಈ ಪಾಸ್ಕಹಬ್ಬವನ್ನು ಕೊಂಡಾಡಬೇಕೆಂಬ ಆಸೆಯಿದ್ದರೆ ಅವನೂ ಅವನ ಕುಟುಂಬಕ್ಕೆ ಸೇರಿದ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ಬಳಿಕ ಅವನು ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆ ಆಗುತ್ತಾನೆ. ಆದರೆ ಸುನ್ನತಿ ಮಾಡಿಸಿಕೊಳ್ಳದ ಯಾವನೂ ಆ ಭೋಜನದಲ್ಲಿ ಭಾಗಿ ಆಗಕೂಡದು.


ನಿಮ್ಮಲ್ಲಿ ಅನ್ಯದೇಶಿಯನೊಬ್ಬನು ಪ್ರವಾಸಿಯಾಗಿದ್ದು ಸರ್ವೇಶ್ವರನಿಗೆ ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ ಅದನ್ನು ವಿಧಿನಿಯಮಗಳ ಅನುಸಾರವೇ ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.


ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ಬೇಗ ಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರ ಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ.


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


“ಯಾಜಕನಲ್ಲದವನು ನೈವೇದ್ಯಪದಾರ್ಥಗಳನ್ನು ಊಟಮಾಡಕೂಡದು. ಅಂತೆಯೇ ಯಾಜಕನ ಅತಿಥಿಯಾಗಲಿ, ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.


ಒಂದು ದಿನ ದೇವಭಕ್ತನೊಬ್ಬನು ಏಲಿಯ ಬಳಿಗೆ ಬಂದು, ಸರ್ವೇಶ್ವರನಿಂದ ಬಂದ ಈ ಸಮಾಚಾರವನ್ನು ತಿಳಿಸಿದನು: “ಇಸ್ರಯೇಲರು ಈಜಿಪ್ಟಿನಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾದೆ;


ಜನರಲ್ಲಿ ಅನೇಕಾನೇಕರು ಅಂದರೆ, ಹೆಚ್ಚಾಗಿ ಎಫ್ರಯಿಮ್, ಮನಸ್ಸೆ, ಇಸ್ಸಾಕಾರ್ ಹಾಗು ಜೆಬಲೂನ್ ಪ್ರಾಂತಗಳವರು, ತಮ್ಮನ್ನು ಶುದ್ಧಪಡಿಸಿಕೊಳ್ಳದೆ, ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ, ಪಾಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಸರ್ವೇಶ್ವರಾ, ದಯಾಪರರಾದ ದೇವರೇ, ಈ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತೆ ಅನೇಕರಲ್ಲಿ ಇಲ್ಲ.


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ಯಾಜಕನ ಮಗಳು ವಿಧವೆಯಾಗಿದ್ದರೆ, ಗಂಡಬಿಟ್ಟವಳಾಗಿದ್ದರೆ, ಮಕ್ಕಳಿಲ್ಲದೆ ಇದ್ದರೆ, ಬಾಲ್ಯದಲ್ಲಿ ತಂದೆಯ ಬಳಿ ಇದ್ದಂತೆಯೇ ಮತ್ತೆ ತಂದೆಯ ಮನೆ ಸೇರಿದ್ದರೆ ಆಕೆ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು