Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:2 - ಕನ್ನಡ ಸತ್ಯವೇದವು C.L. Bible (BSI)

2 “ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನು ನನಗೆ ಮೀಸಲಾಗಿಡು; ಇಸ್ರಯೇಲರಲ್ಲಿ ಮನುಷ್ಯರಿಗಾಗಲಿ ಪಶುಪ್ರಾಣಿಗಳಿಗಾಗಲಿ ಹುಟ್ಟಿದ ಪ್ರಥಮ ಗರ್ಭಫಲ ನನ್ನದೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಮೀಸಲಾಗಿಡು. ಮನುಷ್ಯರಾಗಿರಲಿ, ಪಶುಪ್ರಾಣಿಗಳಾಗಿರಲಿ ಪ್ರಥಮ ಗರ್ಭಫಲವು ನನ್ನದಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:2
19 ತಿಳಿವುಗಳ ಹೋಲಿಕೆ  

ಏಕೆಂದರೆ, ‘ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು.


ವಾಸ್ತವವಾಗಿ ಇಸ್ರಯೇಲರ ಜೇಷ್ಠರೆಲ್ಲರು ನನ್ನ ಸೊತ್ತು, ಈಜಿಪ್ಟ್ ದೇಶದಲ್ಲಿ ಜೇಷ್ಠವಾದುದೆಲ್ಲವನ್ನು ನಾನು ಸಂಹಾರಮಾಡಿದಾಗ ಇಸ್ರಯೇಲರಲ್ಲಿಯ ಜೇಷ್ಠ ಮನುಷ್ಯರನ್ನೂ ಪಶುಪ್ರಾಣಿಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆ. ಆದರೆ ಈಗ ಅಂಥವರಿಗೆ ಬದಲಾಗಿ ಲೇವಿಯರನ್ನು ಆರಿಸಿಕೊಂಡಿದ್ದೇನೆ, ಅವರು ಸರ್ವೇಶ್ವರನಾದ ನನ್ನವರು.”


“ದನಗಳಲ್ಲೂ ಆಡುಕುರಿಗಳಲ್ಲೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.


“ಮನುಷ್ಯರಲ್ಲೇ ಆಗಲಿ, ಪಶುಗಳಲ್ಲೇ ಆಗಲಿ, ಅವರು ನನಗೆ ಸಮರ್ಪಿಸುವ ಸಕಲ ಪ್ರಾಣಿಗಳಲ್ಲಿ ಚೊಚ್ಚಲಿನದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.


“ಶುದ್ಧಪ್ರಾಣಿಯಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಸರ್ವೇಶ್ವರನಿಗೆ ಸೇರಿದ್ದು. ಆದ್ದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಕೂಡದು. ಚೊಚ್ಚಲು ಮರಿ ಹೋರಿಯೇ ಆಗಿರಲಿ, ಆಡುಕುರಿಯೇ ಆಗಿರಲಿ. ಅದು ಸರ್ವೇಶ್ವರನ ಸೊತ್ತು.


ಆಗ ನೀನು ಅವನಿಗೆ ತಿಳಿಸಬೇಕಾದುದು, 'ಸರ್ವೇಶ್ವರನು ಹೇಳುವುದನ್ನು ಕೇಳು: ಇಸ್ರಯೇಲ್ ಜನತೆ ನನಗೆ ಮಗನಂತೆ, ಜ್ಯೇಷ್ಠಪುತ್ರನಂತಿದೆ.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಸರ್ವೇಶ್ವರ ಸ್ವಾಮಿ ಮೋಶೆಗೆ,


“ನಾನು ಇಸ್ರಯೇಲರಲ್ಲಿ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನೇ ಆರಿಸಿಕೊಂಡಿದ್ದೇನೆಂದು ತಿಳಿ. ಆದುದರಿಂದ ಲೇವಿಯರು ನನಗೆ ಸೇರಿದವರು, ನನ್ನ ಸೊತ್ತು.


ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪ್ರಾಣಿಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುತ್ತೇವೆ; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಸೇವೆಯಲ್ಲಿ ಇರುವ ಯಾಜಕರಿಗೆ ಕೊಡುತ್ತೇವೆ;


“ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞವಾಗಿ ಅರ್ಪಿಸಿದೆ.


ನಿನ್ನ ಈ ಸೂಳೆತನ ಅಲ್ಪಕಾರ್ಯವೆಂದು ಭಾವಿಸಿದೆಯೋ? ಅದನ್ನು ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ ಮೂರ್ತಿಗಳಿಗೆ ಆಹುತಿಯಾಗಿಟ್ಟೆ!


“ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.


ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು