Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:21 - ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ಸ್ವಾಮಿ ಅವರಿಗೆ ಹಗಲು ಹೊತ್ತಿನಲ್ಲಿ ದಾರಿತೋರಿಸಲು ಮೇಘಸ್ತಂಭ ರೂಪದಲ್ಲೂ ರಾತ್ರಿವೇಳೆಯಲ್ಲಿ ಬೆಳಕನ್ನೀಯಲು ಅಗ್ನಿಸ್ತಂಭ ರೂಪದಲ್ಲೂ ಅವರ ಮುಂದೆ ಸಾಗಿದರು. ಹೀಗೆ ಅವರು ಹಗಲಿರುಳು ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಹಗಲುಹೊತ್ತಿನಲ್ಲಿ ದಾರಿತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿವೇಳೆಯಲ್ಲಿ ಬೆಳಕುಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವರ ಮುಂಭಾಗದಲ್ಲಿ ಹೋದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ದಾರಿಯನ್ನು ತೋರಿಸಿದನು. ಹಗಲಿನಲ್ಲಿ ಜನರನ್ನು ನಡಿಸಲು ಯೆಹೋವನು ಎತ್ತರವಾದ ಮೇಘಸ್ತಂಭವನ್ನು ಉಪಯೋಗಿಸಿದನು; ರಾತ್ರಿ ವೇಳೆಯಲ್ಲಿ ದಾರಿಯನ್ನು ತೋರಿಸಲು ಯೆಹೋವನು ಎತ್ತರವಾದ ಅಗ್ನಿಸ್ತಂಭವನ್ನು ಉಪಯೋಗಿಸಿದನು. ಈ ಬೆಂಕಿಯು ಅವರಿಗೆ ಬೆಳಕು ಕೊಟ್ಟಿದ್ದರಿಂದ ಅವರು ರಾತ್ರಿಯಲ್ಲಿ ಪ್ರಯಾಣ ಮಾಡಲು ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಅವರು ಹಗಲೂ ರಾತ್ರಿಯೂ ಪ್ರಯಾಣ ಮಾಡುವ ಹಾಗೆ ಯೆಹೋವ ದೇವರು ಹಗಲಲ್ಲಿ ಅವರಿಗೆ ದಾರಿ ತೋರಿಸುವುದಕ್ಕೆ ಮೇಘದ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವುದಕ್ಕೆ ಅಗ್ನಿಯ ಸ್ತಂಭದಲ್ಲಿಯೂ ಅವರ ಮುಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:21
21 ತಿಳಿವುಗಳ ಹೋಲಿಕೆ  

ಹಗಲಲಿ ಅವರ ಮುಂದೆ ಸಾಗಿದಿರಿ ಮೇಘಸ್ತಂಭದಂತೆ ಇರುಳಲಿ ದಾರಿತೋರಿದಿರಿ ಬೆಳಕನೀವ ಅಗ್ನಿಸ್ತಂಭದಂತೆ.


ಮೇಘಸ್ತಂಭದಲಿದ್ದು ಅವರೊಡನೆ ಮಾತಾಡಿದನು I ಕೈಗೊಂಡರು ಅವರು ಆತನಿತ್ತ ವಿಧಿನಿಯಮಗಳನು II


ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ ಕಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ಇರುಳಲ್ಲಿ ಬೆಂಕಿಯಲ್ಲೂ ಹಗಲಲ್ಲಿ ಮೇಘದಲ್ಲೂ ನಿಮ್ಮ ಮುಂದುಗಡೆ ಹೋದ ದೇವರನ್ನು ನೀವು ನಂಬಲಿಲ್ಲ.


ಹಗಲೊಳು ಮೋಡವಿತ್ತನವರಿಗೆ ನೆರಳಿಗೋಸ್ಕರ I ಇರುಳೊಳು ಬೆಂಕಿಯಿತ್ತನವರಿಗೆ ಬೆಳಕಿಗೋಸ್ಕರ II


ಹಗಲಲಿ ಕರೆದೊಯ್ದನು ಮೇಘದ ನೆರಳಲಿ I ಇರುಳೊಳು ನಡೆಸಿದನು ಜ್ವಾಲೆಯ ಬೆಳಕಲಿ II


ಹೀಗಿದ್ದರು ನೀವಾದಿರಿ ಅವರಿಗೆ ಕರುಣಾನಿಧಿ ತೊರೆದುಬಿಡಲಿಲ್ಲ ನೀವವರನು ಮರುಭೂಮಿಯಲಿ. ಬಿಟ್ಟುಹೋಗಲಿಲ್ಲ ದಾರಿತೋರಿದಾ ಮೇಘಸ್ತಂಭ ಹಗಲಲಿ ಮುನ್ನಡೆಯಿತು ಬೆಳಕನೀಯುತಾ ಅಗ್ನಿಸ್ತಂಭ ಇರುಳಲಿ.


ಅಲ್ಲದೆ ಸರ್ವೇಶ್ವರಾ, ನೀವು ಇಸ್ರಯೇಲರ ನಡುವೆ ಇರುವುದಾಗಿ, ನೀವು ಇಸ್ರಯೇಲರಿಗೆ ಪ್ರತ್ಯಕ್ಷ ಕಾಣಿಸಿಕೊಳ್ಳುವುದಾಗಿ, ಹಗಲಿನಲ್ಲಿ ಮೇಘಸ್ತಂಭದಲ್ಲೂ, ಇರುಳಲ್ಲಿ ಅಗ್ನಿಸ್ತಂಭದಲ್ಲೂ ಇದ್ದು ಇವರ ಮುಂದೆ ನಡೆದು ಹೋಗುವುದಾಗಿ ಹಾಗೂ ನೀವಿರುವ ಮೇಘ ಇಸ್ರಯೇಲರ ಮೇಲೆ ಇರುವುದಾಗಿ ಈ ನಾಡಿನವರು ಕೇಳಿದ್ದಾರೆ.


ಅವರು ಪಾಳೆಯದಿಂದ ಹೊರಡುವಾಗ ಹಗಲಲ್ಲಿ ಸರ್ವೇಶ್ವರನ ಮೇಘ ಅವರ ಮೇಲೆ ಇರುತ್ತಿತ್ತು.


ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು:


ಸರ್ವೇಶ್ವರ ತಾವೇ ನಿನ್ನ ಮುಂದುಗಡೆ ಹೋಗುವರು; ಅವರೇ ನಿನ್ನ ಸಂಗಡ ಇರುವರು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ. ಅಂಜಬೇಡ; ಧೈರ್ಯದಿಂದಿರು,” ಎಂದು ಹೇಳಿದನು.


ದೇವಾ, ಪ್ರಜೆಗೆ ಮುಂದಾಳಾಗಿ ನೀ ಹೊರಟಾಗ I ಅರಣ್ಯ ಮಾರ್ಗವಾಗಿ ನೀ ಪ್ರಯಾಣಮಾಡಿದಾಗ II


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?


ಆಗ ಫರೋಹನು, “ನೀವು ನಿಮ್ಮ ಮನೆಯವರೆಲ್ಲರನ್ನು ಕರೆದುಕೊಂಡು ಹೋಗುವುದಕ್ಕೆ ನಾನೆಂದಿಗೂ ಅಪ್ಪಣೆಕೊಡುವುದಿಲ್ಲ. ಕೊಟ್ಟೆನಾದರೆ ಸರ್ವೇಶ್ವರನ ದಯೆಯೊಂದೇ ನಿಮ್ಮನ್ನು ಕಾಪಾಡಬೇಕಾಗುವುದು. ನೋಡಿ, ನೀವು ದುರಾಲೋಚನೆಯಿಂದ ಕೂಡಿದವರು ಎಂಬುದು ಸರಿಯಷ್ಟೆ!


‘ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಯೇಲರು ನೋಡಿ, ಆರೋನನ ಬಳಿಗೆ ಕೂಡಿಬಂದರು. ಅವನಿಗೆ, “ಈಜಿಪ್ಟ್ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆ ಏನಾದನೋ ಗೊತ್ತಿಲ್ಲ. ಆದ್ದರಿಂದ ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು,” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು