Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:3 - ಕನ್ನಡ ಸತ್ಯವೇದವು C.L. Bible (BSI)

3 ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:3
58 ತಿಳಿವುಗಳ ಹೋಲಿಕೆ  

ನೀವೇ ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನುಬಿಡಿಸಿದರೆಂಬುದನ್ನು ನೆನಪುಮಾಡಿಕೊಳ್ಳಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.


ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.


‘ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದ ನಾಡಾಗಿದ್ದು, ಈಜಿಪ್ಟಿನಿಂದ ನಿನ್ನನ್ನು ಬಿಡುಗಡೆ ಮಾಡಿದವನು.


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ಈಜಿಪ್ಟ್ ದೇಶದಲ್ಲಿ ಗುಲಾಮನಾಗಿದ್ದ ನಿನ್ನನ್ನು ಬಿಡುಗಡೆ ಮಾಡಿದ ಸರ್ವೇಶ್ವರನನ್ನು ಆಗ ಮರೆತುಬಿಡದಂತೆ ಎಚ್ಚರಿಕೆಯಿಂದಿರು.


ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.


ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ನಾವು ದಾಸತ್ವದಲ್ಲಿದ್ದ ಈಜಿಪ್ಟಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ.


ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು.


ನೀವೆ ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸುತ್ತಿದ್ದೇನೆ.


ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡಲು ಜಾಗರೂಕರಾಗಿದ್ದದ್ದು ಆ ರಾತ್ರಿಯೇ. ಆದುದರಿಂದಲೆ ಇಸ್ರಯೇಲರೆಲ್ಲರು ತಲತಲಾಂತರಕ್ಕೂ ಸರ್ವೇಶ್ವರನ ಗೌರವಾರ್ಥ ಈ ರಾತ್ರಿಯಲ್ಲೇ ಜಾಗರಣೆಯನ್ನು ಅನುಸರಿಸಬೇಕು.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಹುಳಿಯಿಲ್ಲದ ರೊಟ್ಟಿ ತಿನ್ನುವ ಹಬ್ಬ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರಮಾಸದ ನಿಗದಿಯಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಏಕೆಂದರೆ ಆ ಮಾಸದಲ್ಲೇ ನೀವು ಈಜಿಪ್ಟಿನಿಂದ ಹೊರಟುಬಂದದ್ದು. ನನ್ನ ಸನ್ನಿಧಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯಿಲ್ಲದೆ ಬರೀ ಕೈಯಲ್ಲಿ ಬರಕೂಡದು.


ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು.


ಏಳು ದಿನ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಿರಲಿ, ಸ್ವದೇಶದವನಾಗಿರಲಿ ಇಸ್ರಯೇಲ್ ಜನರಿಂದ ಬಹಿಷ್ಕೃತನು.


ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಮೇತ ಊಟಮಾಡಬೇಕು.


ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.


ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. "ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.


ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.


ಆತನ ದಾಸ ಅಬ್ರಹಾಮನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II


ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು.


ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಅದನ್ನು ಮುರಿದು, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ,” ಎಂದರು.


ಆದಕಾರಣ ನಾವು ದುಷ್ಟತನ, ಕೆಡುಕುತನವೆಂಬ ಹುಳಿಹಿಟ್ಟನ್ನು ವರ್ಜಿಸೋಣ. ಪರಿಶುದ್ಧತೆ ಮತ್ತು ಸತ್ಯತೆ ಎಂಬ ಹುಳಿಯಿಲ್ಲದ ಹೊಸರೊಟ್ಟಿಯನ್ನು ತಿಂದು ಪಾಸ್ಕಹಬ್ಬವನ್ನು ಆಚರಿಸೋಣ.


ಬಳಿಕ ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ನನ್ನ ಸ್ಮರಣೆಗಾಗಿ ಇದನ್ನು ಮಾಡಿರಿ,” ಎಂದರು.


ಈಜಿಪ್ಟಿನವರು ಅವರನು ದರ್ಪದಿಂದ ದಮನಮಾಡುವಲ್ಲಿ ಎಸಗಿದಿರಿ ಅದ್ಭುತಕಾರ್ಯಗಳನು ಸೂಚಕಕಾರ್ಯಗಳನು ಫರೋಹನಲಿ, ಅವನ ಸೇವಕರಲಿ, ಆ ನಾಡಿನ ಜನರಲಿ. ಉಳಿಸಿಕೊಂಡಿರಿ ಇಂದಿಗೂ ಅಂದು ಸಾಧಿಸಿದ ಕೀರ್ತಿಯನು.


ಆತನ ದಾಸ ಇಸ್ರಯೇಲನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II


ನೀವು ಒಂದು ಮನೆಗೆ ಹೋದಾಗ, “ಈ ಮನೆಗೆ ಶುಭವಾಗಲಿ!” ಎಂದು ಹರಸಿರಿ.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.


ಹುಳಿರಹಿತ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ನೀವು ಆಚರಿಸಬೇಕು. ಏಕೆಂದರೆ ಆ ದಿನದಲ್ಲೇ ನಾನು ನಿಮ್ಮ ಪಾಳೆಯದವರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದದ್ದು . ನೀವೂ ನಿಮ್ಮ ಸಂತತಿಯವರೂ ಆ ದಿನವನ್ನು ಆಚರಣೆಗೆ ತರಬೇಕು.


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.


ನಿಮ್ಮ ಪ್ರಜೆಗಳಾದ ಇಸ್ರಯೇಲರಿಗೆ ಸೇರದವನಾದ ಒಬ್ಬ ಪರದೇಶೀಯನು ನಿಮ್ಮ ನಾಮಸ್ತುತಿಗಾಗಿ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು, ನಿಮ್ಮನ್ನು ಪ್ರಾರ್ಥಿಸಿದರೆ,


ಇಸ್ರಯೇಲ್ ಜನರು ಈಜಿಪ್ಟನು ಬಿಟ್ಟು ಹೊರಟಾಗ I ಯಕೋಬ್ಯರು ಪರ ನುಡಿಯಾಡುವರನು ಬಿಟ್ಟಗಲಿದಾಗ, II


ಇಸ್ರಯೇಲರನು ಅಲ್ಲಿಂದ ಹೊರತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


“ಎಲ್ಲ ಮಾಸಗಳಲ್ಲಿ ಇದೇ ನಿಮಗೆ ಆದಿ ಮಾಸವಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರಬೇಕು.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


“ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬಗಳನ್ನು ಆಚರಿಸಿರಿ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನಿಯಮಿತ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಚೈತ್ರಮಾಸದಲ್ಲಿ ಈಜಿಪ್ಟಿನಿಂದ ಬಿಡುಗಡೆಯಾಗಿ ಹೊರಬಂದದ್ದು.


ಆಗ ನೀವು ಅವರಿಗೆ, ‘ನಾವು ಈಜಿಪ್ಟಿನಲ್ಲಿ ಫರೋಹನಿಗೆ ಗುಲಾಮರಾಗಿ ಇದ್ದೆವು. ಸರ್ವೇಶ್ವರ ತಮ್ಮ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದರು;


ನೀನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ, ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ’ ಎಂದು ಹೇಳಿದರು.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ಇದನ್ನು ಇಸ್ರಯೇಲರೆಲ್ಲರು ಕೇಳಿ, ಭಯಪಟ್ಟು, ಅಂಥ ದುಷ್ಕಾರ್ಯವನ್ನು ಮುಂದೆ ಮಾಡರು.


“ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು.


ಭುಜಬಲ, ಶಿಕ್ಷಾಹಸ್ತ, ಮಹಾಭೀತಿ, ಮಹತ್ಕಾರ್ಯ, ಸೂಚಕಕಾರ್ಯ, ಇವುಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದರು.


ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತಂದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಮುತ್ತಲಿನ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸರ್ವೇಶ್ವರನನ್ನು ರೇಗಿಸಿದರು.


ಅವನು ಬಂದು ಇಸ್ರಯೇಲರಿಗೆ ಹೀಗೆಂದನು: “ನಿಮ್ಮ ದೇವರಾದ ಸರ್ವೇಶ್ವರ ಹೇಳುವ ಈ ಮಾತುಗಳನ್ನು ಗಮನಿಸಿರಿ: ‘ನೀವು ದಾಸತ್ವದಲ್ಲಿದ್ದಾಗ ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ನಾನು.


ಅವರು ನಿಮ್ಮ ದಾಸರು ಹಾಗೂ ನೀವು ನಿಮ್ಮ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿಮ್ಮ ಪ್ರಜೆಗಳೂ ಆಗಿರುತ್ತಾರಲ್ಲವೆ?


ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


ಭುಜಬಲದಿಂದ ಕೈಚಾಚಿ ಅವರನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


“ಇಸ್ರಯೇಲರ ದೇವರಾದ ಸರ್ವೇಶ್ವರನ ವಾಣಿ ಇದು - ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಜರನ್ನು ನಾನು ಅಲ್ಲಿಂದ ಕರೆದುತಂದಾಗ ನಾನು ಅವರೊಡನೆ ಒಂದು ಒಪ್ಪಂದಮಾಡಿಕೊಂಡೆ.


“ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು