Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:9 - ಕನ್ನಡ ಸತ್ಯವೇದವು C.L. Bible (BSI)

9 ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಾದದರಿಂದ ಆತನ ನಿಯಮವನ್ನು ಕುರಿತು ನೀವು ಮಾತಾಡಬೇಕೆಂಬದಕ್ಕಾಗಿ ಈ ಆಚಾರವು ನಿಮಗೆ ಕೈಯಲ್ಲಿ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:9
38 ತಿಳಿವುಗಳ ಹೋಲಿಕೆ  

ಜ್ಞಾಪಕಾರ್ಥವಾಗಿ ಅವುಗಳನ್ನು ನಿನ್ನ ಕೈಗೆ ಕಟ್ಟಿಕೊ; ಜ್ಞಾಪಕ ಪಟ್ಟಿಯಂತೆ ಹಣೆಗೆ ತೊಟ್ಟುಕೊ.


ಆ ಗೊಂಡೆಗಳ ಪ್ರಯೋಜನವಿದು - ನೀವು ಅವುಗಳನ್ನು ನೋಡುವಾಗ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅವುಗಳನ್ನು ಪಾಲಿಸಬೇಕು. ಹಿಂದೆ ನೀವು ನನಗೆ ದ್ರೋಹಿಗಳಾಗಿ ನಿಮ್ಮ ಮನಸ್ಸಿಗೆ ಬಂದಂತೆ, ಕಣ್ಣಿಗೆ ತೋರಿದಂತೆ ದಾರಿತಪ್ಪಿ ನಡೆದಿರಿ.


ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಈ ಸಂದೇಶವನ್ನು ನೀವು ನೆನಪಿನಲ್ಲಿಡಬೇಕು. ಇದಕ್ಕೆ ಈ ಪದ್ಧತಿಯು ನಿಮ್ಮ ಕೈಗೆ ಕಟ್ಟಿದ ಕಂಕಣದಂತಿರುತ್ತದೆ, ಹಣೆಗೆ ಕಟ್ಟಿದ ಜ್ಞಾಪಕಪಟ್ಟಿಯಂತಿರುತ್ತದೆ.


ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ಧರ್ಮಗ್ರಂಥವು ಹೇಳುವುದಿಷ್ಟೆ; ದೇವರ ವಾಕ್ಯ ನಿನ್ನ ಸಮೀಪದಲ್ಲೇ ಇದೆ. ಅದು ನಿನ್ನ ಬಾಯಲ್ಲೂ ಹೃದಯದಲ್ಲೂ ಇದೆ. ಅದೇ ನಾವು ನಿಮಗೆ ಬೋಧಿಸುವ ವಿಶ್ವಾಸದ ವಾಕ್ಯ.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


ಅನುಸರಿಸುವುದಕ್ಕೆ ಸಾಧ್ಯವಾಗುವಂತೆ ಈ ವಾಕ್ಯ ನಿಮಗೆ ಸಮೀಪದಲ್ಲಿ ಇದೆ; ಇದು ನಿಮ್ಮ ಬಾಯಲ್ಲೇ ಇದೆ; ಹೃದಯದಲ್ಲೇ ಇದೆ.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ನೋಡು, ನಿನ್ನ ಚಿತ್ರ ಕೊರೆದಿದೆ ನನ್ನ ಅಂಗೈಗಳಲೆ ನಿನ್ನ ಪೌಳಿಗೋಡೆಗಳು ಇವೆ ಸದಾ ನನ್ನ ಕಣ್ಣೆದುರಿನಲೆ.


ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಮಗನೇ, ಸುಜ್ಞಾನ, ಸದ್ಬುದ್ಧಿಗಳು ನಿನ್ನಲ್ಲಿ ಸ್ಥಿರವಾಗಿರಲಿ; ನಿನ್ನ ಕಣ್ಣುಗಳಿಂದ ಅವು ಮರೆಯಾಗದಿರಲಿ.


ಅವು ನಿನ್ನ ತಲೆಗೆ ಸುಂದರ ಕಿರೀಟ, ನಿನ್ನ ಕೊರಳಿಗೆ ಕಂಠಾಭರಣ.


ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II


ಅವರು ನಿಮ್ಮ ದಾಸರು ಹಾಗೂ ನೀವು ನಿಮ್ಮ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿಮ್ಮ ಪ್ರಜೆಗಳೂ ಆಗಿರುತ್ತಾರಲ್ಲವೆ?


ಈ ದಿನ ನಾನು ನಿನಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿ ನಾಟಿರಲಿ.


ನಿನ್ನ ವೃಕ್ಷದಲಿ, ನಿನ್ನ ಹಸ್ತಗಳಲಿ ಧರಿಸಿಕೊ ನನ್ನನ್ನು ಪ್ರೇಮ ಮುದ್ರೆಯಾಗಿ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ ! ಮತ್ಸರ ಪಾತಾಳದಷ್ಟು ಕ್ರೂರಿ ಅದರ ಜ್ವಾಲೆ ಬೆಂಕಿಯ ಉರಿ ಧಗಧಗಿಸುವ ಕೋಪಾಗ್ನಿ.


ಉರುಳಿನತ್ತ ಹಾರುವ ಹಕ್ಕಿಯಂತೆ, ಕರುಳನ್ನು ತಿವಿಯುವ ಬಾಣದಂತೆ, ತನ್ನ ಪ್ರಾಣಕ್ಕಿರುವ ಅಪಾಯವನ್ನು ತಿಳಿಯದೆ, ಅವಳನ್ನು ತಡಮಾಡದೆ ಹಿಂಬಾಲಿಸುತ್ತಾನೆ ಆತ.


ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. "ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.


ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಭುಜಬಲದಿಂದ ಕೈಚಾಚಿ ಅವರನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಹೇಳಿಕೊಳ್ಳುವನೊಬ್ಬನು ತಾನು ಸರ್ವೇಶ್ವರನ ಶರಣನೆಂದು ಹೆಸರಿಸಿಕೊಳ್ಳುವನು ಇನ್ನೊಬ್ಬನು ತಾನು ಯಕೋಬ್ಯನೆಂದು ಕೈಯಲ್ಲಿ ಹಚ್ಚೆ ಹೊಯ್ದುಕೊಳ್ಳುವನು ಮತ್ತೊಬ್ಬನು ಸರ್ವೇಶ್ವರನ ದಾಸನೆಂದು ಬಿರುದನ್ನು ಧರಿಸಿಕೊಳ್ಳುವನವನು ತಾನು ಇಸ್ರಯೇಲ್ಯನೆಂದು.”


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.


ಆಗ ನೀವು ಅವರಿಗೆ, ‘ನಾವು ಈಜಿಪ್ಟಿನಲ್ಲಿ ಫರೋಹನಿಗೆ ಗುಲಾಮರಾಗಿ ಇದ್ದೆವು. ಸರ್ವೇಶ್ವರ ತಮ್ಮ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದರು;


ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತಂದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಮುತ್ತಲಿನ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸರ್ವೇಶ್ವರನನ್ನು ರೇಗಿಸಿದರು.


ಇಸ್ರಯೇಲರನು ಅಲ್ಲಿಂದ ಹೊರತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


“ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು