Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:10 - ಕನ್ನಡ ಸತ್ಯವೇದವು C.L. Bible (BSI)

10 ಫರೋಹನು ಸಮೀಪಿಸುತ್ತಿರುವುದನ್ನು ಇಸ್ರಯೇಲರು ಕಣ್ಣೆತ್ತಿ ನೋಡಿದರು. ತಮ್ಮನ್ನು ಬೆನ್ನಟ್ಟಿ ಬಂದಿದ್ದ ಈಜಿಪ್ಟಿನವರನ್ನು ಕಂಡು ಬಹಳವಾಗಿ ಭಯಪಟ್ಟು ಸರ್ವೇಶ್ವರನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲ್ಯರು ಕಣ್ಣೆತ್ತಿ ತಮ್ಮ ಹಿಂದೆ ಹೊರಟುಬಂದಿದ್ದ ಐಗುಪ್ತ್ಯರನ್ನು ಕಂಡು ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಫರೋಹನೂ ಅವನ ಸೈನ್ಯವೂ ತಮ್ಮ ಕಡೆಗೆ ಬರುತ್ತಿರುವುದನ್ನು ಇಸ್ರೇಲರು ಕಂಡು ಬಹಳ ಭಯಪಟ್ಟರು. ಅವರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಫರೋಹನು ಸಮೀಪಕ್ಕೆ ಬರುವುದನ್ನು ಇಸ್ರಾಯೇಲರು ಕಣ್ಣೆತ್ತಿ ನೋಡಿದರು. ಈಜಿಪ್ಟಿನವರು ಅವರ ಹಿಂದೆ ಬರುತ್ತಿರುವುದನ್ನು ಕಂಡು ಇಸ್ರಾಯೇಲರು ಬಹಳ ಭಯಪಟ್ಟು ಯೆಹೋವ ದೇವರಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:10
23 ತಿಳಿವುಗಳ ಹೋಲಿಕೆ  

ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II


ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II


ನೋಡಿದಿರಿ ಈಜಿಪ್ಟಿನಲಿ ನಮ್ಮ ಪಿತೃಗಳು ಪಟ್ಟ ಕಷ್ಟವನು ಆಲಿಸಿದಿರಿ ಕೆಂಪುಸಮುದ್ರದ ಬಳಿ ಅವರಿಟ್ಟ ಮೊರೆಯನು.


ಆಗ ನಿಮ್ಮ ಪೂರ್ವಜರು ನನಗೆ ಮೊರೆಯಿಟ್ಟರು. ನಾನು ಅವರಿಗೂ ಈಜಿಪ್ಟಿನವರಿಗೂ ಮಧ್ಯೆ ಕಾರ್ಗತ್ತಲೆಯನ್ನು ಉಂಟುಮಾಡಿದೆ. ಇದಲ್ಲದೆ ಈಜಿಪ್ಟಿನವರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆ. ನಾನು ಈಜಿಪ್ಟಿನಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವೇ ಸಾಕ್ಷಿಗಳು.


ನೋಡಿದನಾತ ಅವರ ಕಷ್ಟಕಾರ್ಪಣ್ಯವನು I ಗಮನಿಸಿದನು ಅವರ ಆರ್ತನಾದವನು II


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.


‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ !


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು.


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿನಿಂದ ಬಿಡುಗಡೆಯಿತ್ತನು ಅವರಿಗೆ II


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿನಿಂದ ಬಿಡುಗಡೆಯಿತ್ತನು ಅವರಿಗೆ II


ಮೋಶೆ ಸರ್ವೇಶ್ವರ ಸ್ವಾಮಿಯನ್ನು ಪ್ರಾರ್ಥಿಸಿದನು. ಆಗ ಸರ್ವೇಶ್ವರ ಅವನಿಗೆ ಒಂದು ಗಿಡವನ್ನು ತೋರಿಸಿದರು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು.


“ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.


“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II


ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು.


ನಿಮ್ಮ ಪೂರ್ವಜರು ಈಜಿಪ್ಟಿನಿಂದ ಬಿಡುಗಡೆಯಾಗಿ ಕೆಂಪುಸಮುದ್ರಕ್ಕೆ ಬರುತ್ತ ಇರುವಾಗ ಈಜಿಪ್ಟಿನವರು ರಥಾಶ್ವಬಲಗಳ ಸಹಿತ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು