Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:12 - ಕನ್ನಡ ಸತ್ಯವೇದವು C.L. Bible (BSI)

12 ನಾವು ಈಜಿಪ್ಟಿನಲ್ಲಿರುವಾಗಲೇ, ‘ನಮ್ಮ ಗೊಡವೆಗೆ ಬರಬೇಡಿ, ನಾವು ಈಜಿಪ್ಟಿನವರಿಗೆ ಗುಲಾಮರಾಗಿಯೇ ಇರುತ್ತೇವೆ,” ಎಂದು ನಿಮಗೆ ನಾವು ಹೇಳಲಿಲ್ಲವೆ? ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಗುಲಾಮರಾಗಿರುವುದೇ ಮೇಲಲ್ಲವೇ?” ಎಂದು ದೂರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ಐಗುಪ್ತದೇಶದಲ್ಲಿದ್ದಾಗಲೇ - ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು ಎಂಬದಾಗಿ ನಿನಗೆ ಹೇಳಲಿಲ್ಲವೇ? ನಾವು ಅರಣ್ಯದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವದೇ ವಾಸಿಯಲ್ಲವೇ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ನಿನಗೆ ಈಜಿಪ್ಟಿನಲ್ಲೇ, ‘ದಯಮಾಡಿ ನಮ್ಮ ಗೊಡವೆಗೆ ಬರಬೇಡ. ನಾವು ಇಲ್ಲಿದ್ದುಕೊಂಡು ಈಜಿಪ್ಟಿನವರ ಸೇವೆಮಾಡಲು ಬಿಡು’ ಎಂದು ಹೇಳಿದ್ದೆವು. ನಾವು ಇಲ್ಲಿಗೆ ಬಂದು ಅರಣ್ಯದಲ್ಲಿ ಸಾಯುವುದಕ್ಕಿಂತ, ಅಲ್ಲೇ ಗುಲಾಮರಾಗಿ ಇದ್ದಿದ್ದರೆ ಒಳ್ಳೆಯದಾಗಿರುತ್ತಿತ್ತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾವು ಈಜಿಪ್ಟ್ ದೇಶದಲ್ಲಿದ್ದಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ, ನಾವು ಈಜಿಪ್ಟಿನವರಿಗೆ ಸೇವೆಮಾಡುತ್ತೇವೆ,’ ಎಂದು ನಿನಗೆ ಹೇಳಲಿಲ್ಲವೇ? ನಾವು ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಸೇವೆ ಮಾಡುವುದೇ ಒಳ್ಳೆಯದಾಗಿತ್ತಲ್ಲಾ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:12
11 ತಿಳಿವುಗಳ ಹೋಲಿಕೆ  

“ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು.


ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಆದರೂ ಅವನ ಮಾತಿಗೆ ಕಿವಿಗೊಡಲಿಲ್ಲ. ಏಕೆಂದರೆ ಅವರ ಮನಸ್ಸು ಅಷ್ಟು ಕುಗ್ಗಿಹೋಗಿತ್ತು, ಅವರ ದಾಸತ್ವ ಅಷ್ಟು ಕ್ರೂರವಾಗಿತ್ತು.


ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.


ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.


ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


“ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.


ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.


ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ.


ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು.


ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು