Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:26 - ಕನ್ನಡ ಸತ್ಯವೇದವು C.L. Bible (BSI)

26 ಅಷ್ಟರಲ್ಲಿ ಸರ್ವೇಶ್ವರ, “ಸಮುದ್ರದ ಮೇಲೆ ನಿನ್ನ ಕೈಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಈಜಿಪ್ಟಿನವರನ್ನೂ ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು,” ಎಂದು ಮೋಶೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಷ್ಟರಲ್ಲಿ ಯೆಹೋವನು ಮೋಶೆಗೆ - ಸಮುದ್ರದ ಮೇಲೆ ನಿನ್ನ ಕೈ ಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ ಅವರ ರಥಗಳನ್ನೂ ರಾಹುತರನ್ನೂ ಮುಣುಗಿಸುವದೆಂದು ಹೇಳಿದನು. ಮೋಶೆ ಸಮುದ್ರದ ಮೇಲೆ ಕೈಚಾಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚು; ನೀರು ಈಜಿಪ್ಟಿನವರ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಕೊಳ್ಳುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟಿನವರನ್ನೂ ಅವರ ರಥಗಳ ಕುದುರೆಯ ಸವಾರರನ್ನೂ ಸಮುದ್ರವು ಮುಳುಗಿಸುವಂತೆ ಸಮುದ್ರದ ಮೇಲೆ ಕೈಚಾಚು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:26
12 ತಿಳಿವುಗಳ ಹೋಲಿಕೆ  

ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು.


ಸರ್ವೇಶ್ವರ, ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಕಾಲುವೆ, ಹೊಳೆ, ಕೆರೆ ಇವುಗಳ ಮೇಲೆ ಚಾಚು. ಆಗ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಏರಿಬರುವುವು, ಎಂದು ಹೇಳು.”


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಸರ್ವೇಶ್ವರ ಮತ್ತೆ ಮೋಶೆಗೆ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟ್ ದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳು. ಅವನು ಚಾಚುವಾಗ ಆ ನೀರೆಲ್ಲ ರಕ್ತವಾಗುವುದು. ಈಜಿಪ್ಟ್ ದೇಶದಲ್ಲೆಲ್ಲೂ ಮರದ ತೊಟ್ಟಿಗಳಲ್ಲೂ ಕಲ್ಲಿನ ಬಾನೆಗಳಲ್ಲೂ ಕೂಡ ರಕ್ತ ತುಂಬಿರುವುದು.”


ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.


ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು


ಫರೋಹನ ರಥಗಳನು, ಸೈನಿಕರನು ಕೆಡವಿಬಿಟ್ಟನಾತ ಕಡಲಲಿ ಫರೋಹನ ವೀರ ಶ್ರೇಷ್ಟರನು ಮುಳುಗಿಸಿಬಿಟ್ಟನಾತ ಕೆಂಪು ಸಮುದ್ರದಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು