Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:8 - ಕನ್ನಡ ಸತ್ಯವೇದವು C.L. Bible (BSI)

8 ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಐಗುಪ್ತದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಬೆನ್ನಟ್ಟಿಹೋದನು. ಇಸ್ರಾಯೇಲ್ಯರು ಅಟ್ಟಹಾಸದಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ಧೈರ್ಯದಿಂದ ಹೋಗುತ್ತಿದ್ದರು. ಆದರೆ ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವನು ಕಠಿಣಗೊಳಿಸಿದ್ದರಿಂದ ಅವನು ಇಸ್ರೇಲರನ್ನು ಬೆನ್ನಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:8
21 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.


ಮೊದಲನೆಯ ತಿಂಗಳಿನ ಹದಿನೈದನೆಯ ದಿನ, ಅಂದರೆ ಪಾಸ್ಕಹಬ್ಬದ ಮರುದಿನ, ಇಸ್ರಯೇಲರು ಈಜಿಪ್ಟರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.


ಭುಜಬಲ, ಶಿಕ್ಷಾಹಸ್ತ, ಮಹಾಭೀತಿ, ಮಹತ್ಕಾರ್ಯ, ಸೂಚಕಕಾರ್ಯ, ಇವುಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದರು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಈ ಸಂದೇಶವನ್ನು ನೀವು ನೆನಪಿನಲ್ಲಿಡಬೇಕು. ಇದಕ್ಕೆ ಈ ಪದ್ಧತಿಯು ನಿಮ್ಮ ಕೈಗೆ ಕಟ್ಟಿದ ಕಂಕಣದಂತಿರುತ್ತದೆ, ಹಣೆಗೆ ಕಟ್ಟಿದ ಜ್ಞಾಪಕಪಟ್ಟಿಯಂತಿರುತ್ತದೆ.


ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.


ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II


ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು; ‘ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂದಲ್ಲ’ವೆಂದುಕೊಂಡು ಈ ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿನಿರ್ಣಯವನು.


ಇಸ್ರಯೇಲರು ಯುದ್ಧಸನ್ನದ್ಧ ಆಗಿಯೇ ಈಜಿಪ್ಟಿನಿಂದ ಹೊರಟರು.


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.


ಆದರೂ ಸರ್ವೇಶ್ವರ, ಮೋಶೆಗೆ ಮುಂತಿಳಿಸಿದಂತೆಯೇ ಆಯಿತು. ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಅವರಿಗೆ ಅಪ್ಪಣೆಕೊಡಲು ಒಪ್ಪಲಿಲ್ಲ.


ಈಜಿಪ್ಟಿನ ಎಲ್ಲ ರಥಗಳನ್ನೂ ಆರುನೂರು ಶ್ರೇಷ್ಠರಥಗಳನ್ನು ತೆಗೆದುಕೊಂಡು ಹೋದನು. ಈ ಎಲ್ಲ ರಥಗಳಲ್ಲಿ ಸೇನಾನಿಗಳಿದ್ದರು.


ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು


ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


ಅವರ ಮನಸ್ಸನ್ನು ಮಂಕುಮಾಡು ಅವರಿಗೆ ನಿನ್ನ ಶಾಪ ತಗಲುವಂತೆ ಮಾಡು.


ನೀವು ಈಜಿಪ್ಟಿನವರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದಿಂದ ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರನು ನಾನೇ. ನಿಮ್ಮ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನಲ್ಲವೆ?


ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.


ಯಾಬೀನನ ಸೇನಾಪತಿ ಸೀಸೆರನನ್ನು ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬರುವರು. ಅವನಿಗೆ ರಥಗಳೂ ಸೇನಾಪಡೆಗಳೂ ಇದ್ದರೂ ನಾನು ನಿನಗೆ ಜಯವನ್ನು ದೊರಕಿಸುವೆನು’,” ಎಂದಳು.


ಹೊರತಂದನು ತನ್ನ ಪ್ರಜೆಯನು ಉಲ್ಲಾಸದಿಂದ I ತಾನಾರಿಸಿಕೊಂಡವರನು ಹರ್ಷೋದ್ಗಾರದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು