Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:13 - ಕನ್ನಡ ಸತ್ಯವೇದವು C.L. Bible (BSI)

13 ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಬಿಡುಗಡೆ ಮಾಡಿದ ಪ್ರಜೆಯನ್ನೋ ಪ್ರೀತಿಯಿಂದ ನಡಿಸಿಕೊಂಡು ನಿನ್ನ ಪರಿಶುದ್ಧ ನಿವಾಸಸ್ಥಾನದ ತನಕ ನಿನ್ನ ಶಕ್ತಿಯಿಂದ ಬರಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು ಪ್ರೀತಿಯಿಂದ ನಡೆಸುವೆ. ನಿನ್ನ ಬಲದಿಂದ ನೀನು ಈ ಜನರನ್ನು ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ವಿಮೋಚಿಸಿದ ಜನರನ್ನು ನೀವು ನಿಮ್ಮ ಪ್ರೀತಿಯಿಂದ ನಡೆಸಿದ್ದೀರಿ. ನೀವು ಅವರನ್ನು ನಿಮ್ಮ ಬಲದಿಂದ ನಿಮ್ಮ ಪರಿಶುದ್ಧ ನಿವಾಸಕ್ಕೆ ನಡೆಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:13
21 ತಿಳಿವುಗಳ ಹೋಲಿಕೆ  

ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ಒಣಗಿಹೋಯಿತಾ ಕೆಂಗಡಲು ಆತನ ಗದರಿಕೆಗೆ I ದಾಟಿಸಿದನಾ ಸಾಗರವನು ಅಡವಿಯೋ ಎಂಬ ಹಾಗೆ II


ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ಅವನು ಇನ್ನೂ ತಡಮಾಡುತ್ತಿರುವುದನ್ನು ಕಂಡು, ಆ ಮನುಷ್ಯರು ಅವನನ್ನು ಹಾಗು ಅವನ ಹೆಂಡತಿ ಮಕ್ಕಳನ್ನು ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಸರ್ವೇಶ್ವರ ಸ್ವಾಮಿಗೆ ಅವನ ಮೇಲೆ ಅಷ್ಟು ಕನಿಕರವಿತ್ತು.


ಹಗಲಲಿ ಅವರ ಮುಂದೆ ಸಾಗಿದಿರಿ ಮೇಘಸ್ತಂಭದಂತೆ ಇರುಳಲಿ ದಾರಿತೋರಿದಿರಿ ಬೆಳಕನೀವ ಅಗ್ನಿಸ್ತಂಭದಂತೆ.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಕ್ಕೆ ತೆಗೆದುಕೊಂಡುಹೋಗು; ಸರ್ವೇಶ್ವರನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ಅವರನ್ನೂ ಅವರ ಆಲಯವನ್ನೂ ನೋಡುವ ಹಾಗೆ ತಾವೇ ನನ್ನನ್ನು ಹಿಂದಕ್ಕೆ ಬರಮಾಡುವರು.


ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II


ನೆನೆದರಾಗ ದೇವರೇ ತಮಗಾಶ್ರಯ ದುರ್ಗವೆಂದು I ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು II


ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು