Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:22 - ಕನ್ನಡ ಸತ್ಯವೇದವು C.L. Bible (BSI)

22 ಬಳಿಕ ಮೋಶೆ ಇಸ್ರಯೇಲರನ್ನು ಕೆಂಪು ಸಮುದ್ರದ ಬಳಿಯಿಂದ ಕರೆದುಕೊಂಡು ಹೋದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಬೇಕಾಯಿತು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಳಿಕ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದ ಬಳಿಯಿಂದ ಪ್ರಯಾಣ ಮಾಡಿಸಲು ಅವರು ಶೂರಿನ ಅರಣ್ಯದೊಳಗೆ ಮೂರು ದಿನ ನಡೆದು ಹೋದರು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಮೇಲೆ ಮೋಶೆಯು ಇಸ್ರಾಯೇಲರನ್ನು ಕೆಂಪು ಸಮುದ್ರದಿಂದ ನಡೆಸಿದನು. ಅವರು ಶೂರಿನ ಮರುಭೂಮಿಯೊಳಗೆ ಹೋದರು. ಅವರು ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿದರೂ ನೀರನ್ನು ಕಂಡುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:22
12 ತಿಳಿವುಗಳ ಹೋಲಿಕೆ  

ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.


ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಸದೆಬಡಿಯುತ್ತಾ ಹೋದನು.


ಇಷ್ಮಾಯೇಲ್ಯರು ಹವೀಲ ಹಾಗು ಶೂರಿನ ಮಧ್ಯೆಯಿರುವ ಪ್ರದೇಶದಲ್ಲಿ ವಾಸಮಾಡಿದರು. ಶೂರ್ ಈಜಿಪ್ಟಿನ ಪೂರ್ವಕ್ಕೆ ಅಸ್ಸೀರಿಯಗೆ ಹೋಗುವ ಹಾದಿಯಲ್ಲಿದೆ. ಹೀಗೆ ಇಷ್ಮಾಯೇಲ್ಯರು ತಮ್ಮ ಸಂಬಂಧಿಕರಿಗೆ ಎದುರುಬದುರಿನಲ್ಲೇ ವಾಸಮಾಡಿದರು.


“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.


ಅಬ್ರಹಾಮನು ಅಲ್ಲಿಂದ ಕಾನಾನ್ ನಾಡಿನ ದಕ್ಷಿಣ ಪ್ರಾಂತಕ್ಕೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿದನು. ಕೆಲವು ಕಾಲ ಗೆರಾರಿನಲ್ಲೂ ಇದ್ದನು.


ಅಲ್ಲಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಏತಾಮಿನ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.


ಈ ಅವಧಿಯಲ್ಲಿ ಅವನು ಮತ್ತು ಅವನ ಜನರು ಗೆಷೂರ್ಯರ ಮೇಲೆ, ಗಿಜ್ರೀಯರ ಮೇಲೆ ಹಾಗು ಅಮಾಲೇಕ್ಯರ ಮೇಲೆ ದಾಳಿಮಾಡುತ್ತಿದ್ದರು. ಇವರುಗಳ ಪ್ರಾಂತ್ಯಗಳು ತೇಲಾಮಿನಿಂದ ಶೂರಿನವರೆಗೂ ಹಾಗು ಈಜಿಪ್ಟಿನವರೆಗೂ ವಿಸ್ತರಿಸಿತ್ತು.


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ತನ್ನ ಜನರನ್ನೋ ಹೊರತಂದನು ಕುರಿಮಂದೆಯಂತೆ I ಅಡವಿಯೊಳು ಪರಿಪಾಲಿಸಿದನು ಕುರಿಗಾಹಿಯಂತೆ II


ಅವರು ಅಂಜದಂತೆ ನಡೆಸಿದನು ಸುರಕ್ಷಿತವಾಗಿ I ಶತ್ರುಗಳನೋ ಆವರಿಸಿತು ಸಮುದ್ರವು ನುಂಗಿ II


ತನ್ನ ಪ್ರಜೆಯನು ಅರಣ್ಯಮಾರ್ಗವಾಗಿ ಕರೆತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಇಸ್ರಯೇಲರು ಸರ್ವೇಶ್ವರನ ಅಪ್ಪಣೆಯ ಪ್ರಕಾರ ಸೀನ್ ಎಂಬ ಮರುಭೂಮಿಯಿಂದ ಹೊರಟು ಮುಂದಕ್ಕೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು