Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:3 - ಕನ್ನಡ ಸತ್ಯವೇದವು C.L. Bible (BSI)

3 “ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲರು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಸಾಕಾಗುವಷ್ಟು ರೊಟ್ಟಿಯನ್ನು ತಿನ್ನುತ್ತಿದ್ದಾಗ, ಯೆಹೋವ ದೇವರ ಕೈಯಿಂದ ಸತ್ತು ಹೋಗಿದ್ದರೆ ಒಳ್ಳೆಯದಾಗಿತ್ತು. ಇಡೀ ಜನಾಂಗವೇ ಹಸಿವೆಯಿಂದ ಸತ್ತು ಹೋಗುವಂತೆ ನಮ್ಮನ್ನು ಈ ಮರುಭೂಮಿಗೆ ಬರಮಾಡಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:3
32 ತಿಳಿವುಗಳ ಹೋಲಿಕೆ  

ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಬೇಸರದಿಂದ ಮೋಶೆಯ ವಿರುದ್ಧ ಗೊಣಗುಟ್ಟಿದರು. “ನೀನು ನಮ್ಮನ್ನು, ನಮ್ಮ ಮಕ್ಕಳನ್ನು ಹಾಗು ದನಕರುಗಳನ್ನು ಈಜಿಪ್ಟಿನಿಂದ ಕರೆದು ತಂದದ್ದು ಏಕೆ? ನೀರಿಲ್ಲದೆ ಸಾಯಿಸುವುದಕ್ಕೋ?” ಎಂದು ದೂರಿದರು.


ಹಸಿವೆಯಿಂದ ಹತರಾದವರಿಗಿಂತ ಖಡ್ಗದಿಂದ ಹತರಾದವರು ಲೇಸು. ತುತ್ತಾದರು ಅವರು ಕ್ಷಾಮಕ್ಕೆ ಕ್ಷಯಿಸಿಹೋದರು ನೆಲದ ಗೆಡ್ಡೆಗೆಣಸೂ ಸಿಗದೆ.


ಮನಸ್ಸಿನಲ್ಲಿ ನಿರಂತರ ಪ್ರಾಣಭಯವಿರುವುದರಿಂದ ಹಾಗು ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದ ನೀವು ಹೊತ್ತಾರೆಯಲ್ಲೇ, ‘ಅಯ್ಯೋ, ಅಯ್ಯೋ, ಸಾಯಂಕಾಲ ಯಾವಾಗ ಬರುವುದೋ?’ ಎಂದೂ ಸಾಯಂಕಾಲದಲ್ಲಿ, ‘ಅಯ್ಯೋ, ಅಯ್ಯೋ, ಮರುದಿನ ಯಾವಾಗ ಬರುವುದೋ?’ ಎಂದೂ ಕೊರಗುವಿರಿ.


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.


ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು!


ಯೆಹೋಶುವನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ಈ ಜನರನ್ನು ಜೋರ್ಡನ್ ನದಿ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶಮಾಡಬೇಕೆಂದಿರುವಿರಾ? ನಾವು ಇಷ್ಟೇ ಸಾಕೆಂದು ಜೋರ್ಡನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.


ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ.


ಪೌಲನು ಪ್ರತ್ಯುತ್ತರವಾಗಿ, “ಅಲ್ಪಕಾಲವಾಗಲಿ, ದೀರ್ಘಕಾಲವಾಗಲಿ, ನೀವು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಎಲ್ಲರೂ ನನ್ನಂತೆಯೇ ಆಗಬೇಕೆಂಬುದೇ ದೇವರಲ್ಲಿ ನಾನು ಮಾಡುವ ಪ್ರಾರ್ಥನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ,” ಎಂದನು.


ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು?


ಏಕೆಂದರೆ ಅದು ನನ್ನ ತಾಯಿಯ ಗರ್ಭದ್ವಾರವನು ನನಗೆ ಮುಚ್ಚಲಿಲ್ಲ ನನ್ನ ಕಣ್ಗಳಿಂದ ದುಃಖದುಗುಡವನು ಮರೆಮಾಡಲಿಲ್ಲ.


ಕೊನೆಗೆ ಯೋಬನೇ ಬಾಯ್ದೆರೆದು ತನ್ನ ಹುಟ್ಟು ದಿನವನ್ನು ಹೀಗೆಂದು ಶಪಿಸಿದ:


ಇದನ್ನು ಕೇಳಿದ್ದೇ ಅರಸನ ಎದೆಯೊಡೆಯಿತು. ಅವನು, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು! ಅಬ್ಷಾಲೋಮನೇ, ನನ್ನ ಮಗನೇ ಮಗನೇ,” ಎಂದು ಕೂಗಿ ಗೋಳಿಡುತ್ತಾ ಹೆಬ್ಬಾಗಿಲಿನ ಮೇಲಿದ್ದ ಕೋಣೆಗೆ ಹೋದನು.


ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.


ಆದರೂ ಇಸ್ರಯೇಲ್ ಸಮುದಾಯದವರು ಮೋಶೆ ಮತ್ತು ಆರೋನರ ಮೇಲೆ ಗೊಣಗುಟ್ಟ ತೊಡಗಿದರು. ‘ಸರ್ವೇಶ್ವರನ ಜನರನ್ನು ಸಾಯಸಿದವರು ನೀವೇ’ ಎಂದು ಹೇಳುವವರಾದರು.


ಅವರು ಅವನಿಗೆ, “ನಾವು ಬರುವುದಿಲ್ಲ, ಹಾಲೂಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆತಂದು ಈ ಮರಳುಗಾಡಿನಲ್ಲಿ ಸಾಯಿಸುತ್ತಿರುವೆ. ಇದು ಅಲ್ಪಕಾರ್ಯವೆಂದು ಎಣಿಸುತ್ತೀಯೋ? ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತಿರುವೆಯೋ?”


ನೀವು ಹೀಗೆ ಮಾಡುವುದಕ್ಕಿಂತಲೂ ನನ್ನನ್ನು ಈ ಕೂಡಲೆ ಕೊಂದುಹಾಕಿದರೆ ಉಪಕಾರವಾದೀತು; ನನಗಾಗುತ್ತಿರುವ ಸಂಕಟವನ್ನು ಸಹಿಸಲಾರೆ,” ಎಂದನು.


ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.


ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು.


ಜರೆವ ಮಾತಿನಲಿ ಆಡಿಕೊಂಡರಿಂತು : I “ಅಡವಿಯಲ್ಲಿ ದೇವನೂಟ ಬಡಿಸುವನೆಂತು?” II


ನರರಿಗುಣಲುಕೊಟ್ಟನು ದೇವದೂತರ ಆಹಾರವನು I ಇತ್ತನವರಿಗೆ ತೃಪ್ತಿಕರವಾದ ಭೂರಿ ಔತಣವನು II


ನಾವು ಈಜಿಪ್ಟಿನಲ್ಲೇ ವಾಸಮಾಡುತ್ತೇವೆ. ಅದು ಯುದ್ಧ ಕಾಣದ, ರಣಕಹಳೆ ಕೇಳದ, ಕೂಳಿನ ಕೊರತೆಯಿಲ್ಲದ ದೇಶ.’ ಎಂದುಕೊಳ್ಳಬೇಡಿ.


ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.


ಮೋಶೆಗೆ ಅವರು, “ಈಜಿಪ್ಟಿನಲ್ಲಿ ಸಮಾಧಿಗಳಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿಯೆಂದು ನಮ್ಮನ್ನು ಇಲ್ಲಿಗೆ ಕರೆದುತಂದಿರೋ? ಈಜಿಪ್ಟಿನಿಂದ ಕರೆದುಕೊಂಡು ಬಂದು ನಮಗೆ ಹೀಗೆ ಮಾಡಿಬಿಟ್ಟಿದ್ದೇಕೆ?


ಅದು ಓಕರಿಕೆಯಾಗಿ, ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ತಿನ್ನುವಿರಿ.”


ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು.


ನರಳಿದರು ಹಸಿವೆ ಬಾಯಾರಿಕೆಯಿಂದ I ಸೊರಗಿದರು ಮನೋಯಾತನೆಯಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು