Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಸ್ವಾಮಿ ತಮ್ಮ ಮಧ್ಯೆ ಇದ್ದಾರೋ ಇಲ್ಲವೋ ಎಂದು ಇಸ್ರಯೇಲರು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ‘ಮಸ್ಸಾ’ ಎಂತಲೂ ಜನರು ತನ್ನೊಡನೆ ವಾಗ್ವಾದ ಮಾಡಿದ್ದರಿಂದ ‘ಮೆರೀಬಾ’ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೋಶೆ ಆ ಸ್ಥಳಕ್ಕೆ ಮಸ್ಸಾ ಮತ್ತು ಮೆರೀಬಾ ಎಂದು ಹೆಸರಿಟ್ಟನು. ಯಾಕೆಂದರೆ ಈ ಸ್ಥಳದಲ್ಲಿ ಇಸ್ರೇಲರು ಅವನಿಗೆ ವಿರುದ್ಧವಾಗಿ ದಂಗೆ ಎದ್ದು ಯೆಹೋವನನ್ನು ಪರೀಕ್ಷಿಸಿದರು. ಯೆಹೋವನು ಅವರೊಡನೆ ಇದ್ದಾನೋ ಇಲ್ಲವೋ ಎಂದು ಜನರು ತಿಳಿಯಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಯೆಹೋವ ದೇವರು ತಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ,” ಎಂದು ಜನರು ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂದು ಹೆಸರಿಟ್ಟನು. ಅಲ್ಲಿ ಇಸ್ರಾಯೇಲರು ತನ್ನೊಡನೆ ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:7
21 ತಿಳಿವುಗಳ ಹೋಲಿಕೆ  

“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II


ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II


ಇಸ್ರಯೇಲರು ಅಲ್ಲಿ ಸರ್ವೇಶ್ವರನ ಸಂಗಡ ವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ‘ಮೆರೀಬಾ’ ಎಂದು ಹೆಸರಾಯಿತು. ಅಲ್ಲಿ ಸರ್ವೇಶ್ವರ ತಮ್ಮ ಪರಮ ಪಾವನತೆಯನ್ನು ವ್ಯಕ್ತಪಡಿಸಿದರು.


“ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲೂ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ.


ಅಲ್ಲಿ ಕುಡಿಯುವುದಕ್ಕೆ ನೀರಿರಲಿಲ್ಲ. ಜನರು ಮೋಶೆಯ ಸಂಗಡ ಜಗಳವಾಡುತ್ತಾ, “ನಮಗೆ ಕುಡಿಯುವುದಕ್ಕೆ ನೀರು ತೋರಿಸಬೇಕು,” ಎಂದು ಹೇಳಿದರು. ಆಗ ಮೋಶೆ, “ನೀವು ನನ್ನ ಸಂಗಡ ವಾದಿಸುವುದೇಕೆ? ಸರ್ವೇಶ್ವರನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


“ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ, “ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆಂದು ಈಗ ಅರಿವಾಯಿತು. ನೀವು ಸರ್ವೇಶ್ವರಸ್ವಾಮಿಗೆ ವಿರುದ್ಧ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಇಸ್ರಯೇಲರನ್ನು ಆತನ ಶಿಕ್ಷಾಹಸ್ತದಿಂದ ತಪ್ಪಿಸಿದಿರಿ,” ಎಂದನು.


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.


ಚಿನ್ ಮರುಭೂಮಿಯಲ್ಲಿ ಇಸ್ರಯೇಲ್ ಸಮಾಜದವರು ನನ್ನೊಡನೆ ವಿವಾದಿಸಿದರು. ಆಗ ನೀವಿಬ್ಬರೂ ನನ್ನ ಗೌರವವನ್ನು ಅವರ ಮುಂದೆ ಕಾಪಾಡದೆಹೋದಿರಿ; ನನ್ನ ಆಜ್ಞೆಯನ್ನು ಉಲ್ಲಂಘಿಸಿದಿರಿ. ಆದ್ದರಿಂದ ನೀವು ಆ ನಾಡನ್ನು ಸೇರಬಾರದು.” ಚಿನ್ ಮರುಭೂಮಿಯಲ್ಲಿನ ಕಾದೇಶಿನಲ್ಲಿರುವ ಮೆರಿಬಾ ಜಲಾಶಯದ ಬಳಿ ನಡೆದ ಘಟನೆಯನ್ನು ಸೂಚಿಸುತ್ತಾ ಇದನ್ನು ನುಡಿದರು.


“ಮಸ್ಸದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದಂತೆ ಇನ್ನು ಮುಂದೆ ಮಾಡಬೇಡಿ.


ಲೇವಿಯ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರಾ, ನೀಡಿವನಿಗೆ ನಿನ್ನ ವಿಧಿ ತಿಳಿಸುವ ಊರಿಮ್, ನಿನ್ನ ಭಕ್ತನಾದ ಇವನ ವಶದಲ್ಲಿರಲಿ ಆ ತುಮ್ಮೀಮ್. ನೀನಿವನನ್ನು ಪರೀಕ್ಷಿಸಿದೆ ಮಸ್ಸದಲ್ಲಿ ವಿವಾದಿಸಿದೆ ಜಲ ಹೊರಹೊಮ್ಮಿದ ಮೆರೀಬದಲ್ಲಿ.


ಕೋರಿದರು ತಮಗಿಷ್ಟವಾದ ಆಹಾರವನೇ I ಪರೀಕ್ಷಿಸಿದರು ಮನದಲಿ ಆ ದೇವರನೇ II


“ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ I ಹಾಗೆ ಮಾಡಿದರೆ ಇಸ್ರಯೇಲರೆ, ಹಿತ ನಿಮಗೆ, II


ಮೆರಿಬಾ ನದಿಯ ಬಳಿ ರೇಗಿಸಿದರಾತನನು I ಹೀಗೆ ಬರಮಾಡಿದರು ಮೋಶೆಗೂ ಹಾನಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು