Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:20 - ಕನ್ನಡ ಸತ್ಯವೇದವು C.L. Bible (BSI)

20 ಅಂತೆಯೇ ದೇವರ ಆಜ್ಞಾವಿಧಿಗಳನ್ನು ಜನರಿಗೆ ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನು ಹಾಗು ಕೈಗೊಳ್ಳಬೇಕಾದ ಕಾರ್ಯಗಳನ್ನು ತಿಳಿಯಪಡಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮತ್ತು ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನೂ ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀನು ದೇವರ ಕಟ್ಟಳೆಗಳನ್ನು ಮತ್ತು ಬೋಧನೆಗಳನ್ನು ಜನರಿಗೆ ಬೋಧಿಸಬೇಕು; ನಿಬಂಧನೆಗಳನ್ನು ಉಲ್ಲಂಘಿಸದಂತೆ ಅವರನ್ನು ಎಚ್ಚರಿಸಬೇಕು; ಜೀವಿಸಲು ಸರಿಯಾದ ಮಾರ್ಗವನ್ನು ಅವರಿಗೆ ಬೋಧಿಸಬೇಕು; ಅವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಯಮಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕಲಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಅವರು ಮಾಡಬೇಕಾದ ಕೆಲಸವನ್ನೂ ಅವರಿಗೆ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:20
21 ತಿಳಿವುಗಳ ಹೋಲಿಕೆ  

ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ.


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ಹೀಗೆ, ನೀವು ಮಾಡಬೇಕಾದ ಎಲ್ಲ ಕಾರ್ಯಗಳ ವಿಷಯದಲ್ಲೂ ಆಗಲೇ ನಿಮಗೆ ಆಜ್ಞೆಕೊಟ್ಟೆ.


ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ಅವರಲ್ಲಿ ವ್ಯಾಜ್ಯವೇನಾದರು ಉಂಟಾದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ, ಅವರಿಗೆ ನ್ಯಾಯ ತೀರಿಸಿ, ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ,” ಎಂದು ಉತ್ತರಿಸಿದನು.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಾವು ನಡೆಯಬೇಕಾದ ಮಾರ್ಗವನ್ನೂ ಕೈಗೊಳ್ಳಬೇಕಾದ ಕಾರ್ಯವನ್ನೂ ತೋರಿಸುವಂತೆ ನಮಗಾಗಿ ಪ್ರಾರ್ಥಿಸಬೇಕು. ಅಳಿದುಳಿದಿರುವ ಈ ಎಲ್ಲ ಜನರಿಗಾಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪ್ರಾರ್ಥಿಸಬೇಕು. ನಿಮ್ಮ ಕಣ್ಣಿಗೆ ಕಾಣುವಂತೆ ಹೇರಳವಾದ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ,” ಎಂದು ವಿಜ್ಞಾಪಿಸಿದರು.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ಆದಕಾರಣ ನಾನು ಈ ದಿನ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.


ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನೀನೇ ಹತ್ತಿರಕ್ಕೆ ಹೋಗಿ, ನಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ಅದರಂತೆ ನಡೆಯುತ್ತೇವೆ’ ಎಂದು ಹೇಳಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು