Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:21 - ಕನ್ನಡ ಸತ್ಯವೇದವು C.L. Bible (BSI)

21 ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ ದೇವಭಕ್ತರೂ ನಂಬಿಗಸ್ತರೂ ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:21
49 ತಿಳಿವುಗಳ ಹೋಲಿಕೆ  

ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.


ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


“ನೀವು ಮಾಡಬೇಕಾದುದು ಏನೆಂದರೆ: ಪ್ರತಿಯೊಬ್ಬನು ತನ್ನ ನೆರೆಯವನೊಡನೆ ಸತ್ಯವನ್ನೇ ಆಡಲಿ. ನ್ಯಾಯಾಲಯಗಳಲ್ಲಿ ನಿಮ್ಮ ತೀರ್ಪು ನ್ಯಾಯಸಮ್ಮತವಾಗಿರಲಿ, ಶಾಂತಿಯ ಸಾಧನ ಆಗಿರಲಿ.


:ಸತ್ಯಾನುಸಾರ ನ್ಯಾಯತೀರಿಸಿರಿ.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು.


ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II


ನನ್ನ ದಾಸದಾಸಿಯರು ನನ್ನ ಮೇಲೆ ತಪ್ಪುಹೊರಿಸಿದ್ದರೆ ನಾನು ಆ ತಪ್ಪನು ಅಸಡ್ಡೆ ಮಾಡಿದವನಾಗಿದ್ದರೆ,


ದರಿದ್ರನಿಗೆ ತಂದೆಯಾಗಿದ್ದೆ ಅಪರಿಚಿತರ ವ್ಯಾಜ್ಯವನು ತೀರಿಸುತ್ತಿದ್ದೆ.


ಆಮೇಲೆ ನನ್ನ ತಮ್ಮ ಹನಾನಿಗೆ ಹಾಗು ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾ ಅಧಿಕಾರಿಯೂ ಆಗಿದ್ದ ಹನನ್ಯನಿಗೆ ಜೆರುಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆ.


ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.


ಇಸ್ರಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಮೇಲೆ ಅಧಿಪತಿಗಳನ್ನು ನೇಮಿಸಿದನು.


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;


ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ;


“ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ.


ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”


ನಾನು ತಮ್ಮನ್ನು ಬಿಟ್ಟು ಹೊರಟ ಕೂಡಲೆ, ಸರ್ವೇಶ್ವರನ ಆತ್ಮ ತಮ್ಮನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ತಾವು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಚಿಕ್ಕಂದಿನಿಂದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಆದುದರಿಂದ ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬವನನ್ನು ಕರೆಯಿಸಿದನು.


ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಾಶದಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಾಯುಧ, ರಥಸಾಮಗ್ರಿಗಳನ್ನು ಮಾಡುವವರೂ ಆಗಬೇಕು.


ಮತ್ತು ಕುಲಕ್ಕೆ ಒಬ್ಬನಂತೆ ಹತ್ತುಮಂದಿ ನಾಯಕರನ್ನೂ ಕಳಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ-ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.


ಒಂದನ್ನು ಮಾತ್ರ ಊದಿಸಿದಾಗ ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳಾದ ಮುಖ್ಯಸ್ಥರು ನಿನ್ನ ಬಳಿಗೆ ಕೂಡಿಬರಬೇಕು.


ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.


ಈ ಕೆಲಸಕ್ಕಾಗಿ ಒಂದೊಂದು ಕುಲದಿಂದ ಆಯಾ ಕುಲದ ಮುಖ್ಯಸ್ಥನನ್ನು ಸಹಾಯಕನನ್ನಾಗಿ ತೆಗೆದುಕೊಳ್ಳಿ;


ಇವರು ಸಮಾಜದಲ್ಲಿ ಹೆಸರು ಪಡೆದವರು. ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನ ಪುರುಷರು, ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳು.


ಇಸ್ರಯೇಲಳಾದ ಮಹಿಳೆಯ ಬಗ್ಗೆ ಆ ವ್ಯಕ್ತಿ ನಿರಾಧಾರವಾದ ತಪ್ಪು ಹೊರಿಸಿದ್ದರಿಂದ


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶ ಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಯೋಗ್ಯನಾರು ಪ್ರಭು ನಿನ್ನ ಗುಡಾರದಲಿ ಬಿಡಾರಮಾಡಲು? I ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು? II


‘ಮೋಶೆ ಯೆಹೋಶುವನಿಗೆ, “ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು,” ಎಂದು ಹೇಳಿದನು.


ತರುವಾಯ ಅರಸನಾದ ದಾವೀದನು ತನ್ನ ಹತ್ತಿರ ಇದ್ದ ಸೈನಿಕರನ್ನು ಎಣಿಸಿ ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು