Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:23 - ಕನ್ನಡ ಸತ್ಯವೇದವು C.L. Bible (BSI)

23 ಹೀಗೆ ಮಾಡಲು ದೇವರು ನಿನಗೆ ಅಪ್ಪಣೆ ಕೊಡಲಿ; ಮಾಡಿದರೆ ಈ ಹೊಣೆಯನ್ನು ನಿರ್ವಹಿಸಲು ಶಕ್ತನಾಗುವೆ; ಈ ಜನರೂ ಕೂಡ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದೇವರು ಹೀಗೆ ಮಾಡುವದಕ್ಕೆ ನಿನಗೆ ಅಪ್ಪಣೆ ಕೊಡುವದಾದರೆ ನೀನು ಈ ಕೆಲಸದ ಭಾರವನ್ನು ನಿರ್ವಹಿಸಲಾಗುವದು; ಇದು ಮಾತ್ರವಲ್ಲದೆ ಈ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಸಂತೋಷವಾಗಿ ಹೋಗುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀನು ಈ ಸಂಗತಿಗಳನ್ನು ಮಾಡಿದರೆ, ಯೆಹೋವನ ಚಿತ್ತವಿದ್ದರೆ, ನೀನು ನಿನ್ನ ಕೆಲಸವನ್ನು ಮಾಡುತ್ತಾ ಮುಂದುವರಿಯಲು ಶಕ್ತನಾಗುವೆ ಮತ್ತು ಅದೇ ಸಮಯದಲ್ಲಿ ಜನರೆಲ್ಲರೂ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಂಡು ಮನೆಗೆ ಹೋಗಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಈ ಕಾರ್ಯವನ್ನು ಮಾಡುವುದಕ್ಕೆ ದೇವರು ನಿನಗೆ ಅಪ್ಪಣೆ ಕೊಟ್ಟರೆ, ಆಗ ನೀನು ಇದನ್ನು ನಿರ್ವಹಿಸಲು ಶಕ್ತನಾಗುವೆ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:23
15 ತಿಳಿವುಗಳ ಹೋಲಿಕೆ  

ಈ ಕೆಲಸ ಬಹು ಕಷ್ಟಕರವಾದುದು; ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನೂ ನಿನ್ನ ಈ ಜನರೂ ಖಂಡಿತವಾಗಿ ಬಳಲಿಹೋಗುವಿರಿ.


ಸರ್ವೇಶ್ವರ ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು,” ಎಂದರು. ಆಗ ಸಮುವೇಲನು ಇಸ್ರಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ,” ಎಂದು ಅಪ್ಪಣೆಕೊಟ್ಟನು.


ಆಗ ಸೈನಿಕರು, “ನೀವು ಬರಬಾರದು; ನಾವು ಸೋತು ಓಡಿಹೋದರೆ ಶತ್ರುಗಳು ಲಕ್ಷಿಸುವುದಿಲ್ಲ; ನಮ್ಮಲ್ಲಿ ಅರ್ಧಜನ ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿಮ್ಮೊಬ್ಬರಿಗೇ ಉಂಟು. ತಾವು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು,” ಎಂದರು.


ಅನಂತರ ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿ ಸರ್ವೇಶ್ವರ ಸ್ವಾಮಿ ಹೊರಟುಹೋದರು. ಅಬ್ರಹಾಮನು ತನ್ನ ಮನೆಗೆ ಹಿಂತಿರುಗಿದನು.


ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.


ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.


ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.


ಜನರೆಲ್ಲರು ನದಿ ದಾಟಿದರು. ಅರಸನು ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಮರಳಿದನು.


ರಾಖೇಲಳು ಜೋಸೆಫನನ್ನು ಹೆತ್ತ ಬಳಿಕ ಯಕೋಬನು ಲಾಬಾನನಿಗೆ, “ನನಗೆ ಅಪ್ಪಣೆಯಾಗಬೇಕು, ನಾನು ಸ್ವಂತ ಊರಿಗೂ ನಾಡಿಗೂ ಹಿಂದಿರುಗಬೇಕಾಗಿದೆ.


ನೋಡಿ, ಸಬ್ಬತ್ ದಿನವನ್ನು ನೀವು ಆಚರಿಸಬೇಕೆಂದು ಸರ್ವೇಶ್ವರನಾದ ನಾನು ಅಪ್ಪಣೆ ಮಾಡಿರುವುದರಿಂದಲೇ ಆರನೆಯ ದಿನ ಎರಡು ದಿನದ ಆಹಾರ ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು,’ ಎಂದು ಮೋಶೆಗೆ ಹೇಳಿದರು.


ಅವರೇ ಸದಾ ಜನರಿಗೆ ನ್ಯಾಯ ತೀರಿಸಲಿ; ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಆಗ ಅವರೂ ಈ ಹೊಣೆಯನ್ನು ಹೊರುವುದರಿಂದ ನಿನ್ನ ಹೊರೆ ಹಗುರವಾಗುವುದು.


ಮೋಶೆ ತನ್ನ ಮಾವನ ಸಲಹೆಯನ್ನು ಒಪ್ಪಿಕೊಂಡನು. ಅವನು ಹೇಳಿದಂತೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು